ಮಲೆಮಹದೇಶ್ವರ ದೇವಸ್ಥಾನದ ಗೋಪುರವೇರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Edited By: ವಿವೇಕ ಬಿರಾದಾರ

Updated on: Apr 12, 2025 | 8:39 PM

ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪ ದೇವಸ್ಥಾನದ ಗೋಪುರವೇರಿ ಮೃತ್ಯುಂಜಯ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದರು. "ಉಘೇ ಮಾದಪ್ಪ" ಎಂದು ಕೂಗುತ್ತಾ ಜಿಗಿಯಲು ಯತ್ನಿಸುತ್ತಿದ್ದ ಅವರನ್ನು ದೇವಸ್ಥಾನದ ಸಿಬ್ಬಂದಿ ರಕ್ಷಿಸಿದ್ದಾರೆ. ಮೃತ್ಯುಂಜಯ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಈ ಘಟನೆಯ ದೃಶ್ಯ ಭಕ್ತರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಚಾಮರಾಜನಗರ, ಏಪ್ರಿಲ್​ 12: ಹನೂರು ತಾಲೂಕಿನಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿನ (Male Mahadeshwar hill) ಮಾದಪ್ಪನ ದೇವಸ್ಥಾನದ ಗೋಪುರವೇರಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಪ್ರಾಧಿಕಾರದ ಸಿಬ್ಬಂದಿ ರಕ್ಷಸಿದ್ದಾರೆ. ಹೆಚ್.ಡಿ.ಕೋಟೆ (HD Kote) ಮೂಲದ ಮೃತ್ಯುಂಜಯ ಎಂಬುವರು ಉಘೇ ಮಾದಪ್ಪ ಎಂದು ಘೋಷಣೆ ಕೂಗಿ ದೇವಸ್ಥಾನದ ಗೋಪುರದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸುತಿದರು. ಕೂಡಲೇ, ಪ್ರಾಧಿಕಾರದ ಸಿಬ್ಬಂದಿ ಗೋಪುರವೇರಿ ಮೃತ್ಯುಂಜಯ ಅವರನ್ನು ರಕ್ಷಿಸಿ, ಕೆಳಗಿಳಿಸಿದ್ದಾರೆ. ಇನ್ನು, ಮೃತ್ಯುಂಜಯ ಮಾನಸಿಕ ಖಿನ್ನತೆಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಭಕ್ತರೊಬ್ಬರ ಮೊಬೈಲ್​ನಲ್ಲಿ ಮೃತ್ಯುಂಜಯ ಆತ್ಮಹತ್ಯೆಗೆ ಯತ್ನಿಸಿದ ದೃಶ್ಯ ಸೆರೆಯಾಗಿದೆ.

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More