ಪೆಟ್ರೋಲ್ ಬಂಕ್​ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!

Updated on: Feb 20, 2026 | 10:47 PM

ರಾಯ್‌ಪುರದಲ್ಲಿ ಪೆಟ್ರೋಲ್ ಪಂಪ್‌ನಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ಸ್ವಂತ ಬೈಕ್‌ಗೆ ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿ ನಿಯಂತ್ರಣಕ್ಕೆ ಬಂದ ನಂತರ, ಇಬ್ಬರು ವ್ಯಕ್ತಿಗಳು ಓಡಿಹೋಗಲು ಪ್ರಯತ್ನಿಸಿದರು. ಆದರೆ ಪಂಪ್ ಸಿಬ್ಬಂದಿ ಅವರನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದರು. ಪೆಟ್ರೋಲ್ ಪಂಪ್ ಉದ್ಯೋಗಿ ಟ್ಯಾಂಕ್ ತುಂಬಲು ಪ್ರಾರಂಭಿಸುತ್ತಿದ್ದಂತೆ, ಹಿಂಬದಿ ಸವಾರ ವ್ಯಕ್ತಿ ಇಳಿದು ಸಿಗರೇಟ್ ಹಚ್ಚಲು ಪ್ರಯತ್ನಿಸಿದಾಗ ಇನ್ನೊಬ್ಬ ಕುಳಿತಿದ್ದ.

ರಾಯ್​ಪುರ, ಫೆಬ್ರವರಿ 20: ಛತ್ತೀಸ್‌ಗಢದ ರಾಯ್‌ಪುರದ ಪೆಟ್ರೋಲ್ ಬಂಕ್ ಒಂದಕ್ಕೆ ಪೆಟ್ರೋಲ್ ಹಾಕಿಸಲು ಬಂದ ಬೈಕ್​ನಲ್ಲಿದ್ದ ಯುವಕರಲ್ಲಿ ಒಬ್ಬ ಸಿಗರೇಟ್ ಸೇದುತ್ತಿದ್ದ. ಇಲ್ಲಿ ಸಿಗರೇಟ್ ಹಚ್ಚಬೇಡಿ ಎಂದು ಪೆಟ್ರೋಲ್ ಬಂಕ್​ ಸಿಬ್ಬಂದಿ ಹೇಳುತ್ತಿದ್ದಂತೆ ಆತ ತನ್ನ ಬೈಕ್​ನ ಪೆಟ್ರೋಲ್ ಟ್ಯಾಂಕ್​ಗೆ ಲೈಟರ್​​ನಿಂದ ಬೆಂಕಿ ಹಚ್ಚಿದ್ದಾನೆ. ತಕ್ಷಣ ಆ ಬೈಕ್ ಹೊತ್ತಿ ಉರಿದು, ಪೆಟ್ರೋಲ್ ಬಂಕ್​ಗೂ ಬೆಂಕಿ (Fire Accident) ಆವರಿಸಿಕೊಂಡಿದೆ. ಕೂಡಲೆ ಅಲ್ಲಿದ್ದ ಸಿಬ್ಬಂದಿ ಬೆಂಕಿ ಆರಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇಲ್ಲದಿದ್ದರೆ ಇಡೀ ಪೆಟ್ರೋಲ್ ಬಂಕ್ ಸ್ಫೋಟಗೊಂಡು ದುರಂತ ಸಂಭವಿಸುತ್ತಿತ್ತು. ಈ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಕಿ ನಿಯಂತ್ರಣಕ್ಕೆ ಬಂದ ನಂತರ, ಇಬ್ಬರು ವ್ಯಕ್ತಿಗಳು ಓಡಿಹೋಗಲು ಪ್ರಯತ್ನಿಸಿದರು. ಆದರೆ ಪಂಪ್ ಸಿಬ್ಬಂದಿ ಅವರನ್ನು ಹಿಡಿದು ಪೊಲೀಸರಿಗೆ ಕರೆ ಮಾಡಿದರು. ನಂತರ ಪೊಲೀಸರು ದೂರು ದಾಖಲಿಸಿದರು. ಉರ್ಲಾ ಪೊಲೀಸರು ಅವರನ್ನು ಬಂಧಿಸಿ ಅವರ ಬೈಕ್ ಮತ್ತು ಘಟನೆಯಲ್ಲಿ ಬಳಸಿದ ಲೈಟರ್ ಅನ್ನು ವಶಪಡಿಸಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 20, 2026 08:25 PM
Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More