ಉತ್ತರ ಪ್ರದೇಶದಲ್ಲಿ ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ

Updated on: Jun 10, 2025 | 10:04 PM

ಉತ್ತರ ಪ್ರದೇಶದ ಜಾನ್‌ಪುರದಲ್ಲಿ ಹಾರ ಹಾಕಿ ಸ್ವಾಗತ ಭಾಷಣ ಮಾಡಿದ ನಂತರ ಮಹೇಂದ್ರ ರಾಜ್‌ಭರ್ ಅವರಿಗೆ ವ್ಯಕ್ತಿಯೊಬ್ಬರು ಕಪಾಳಮೋಕ್ಷ ಮಾಡಿದ್ದಾರೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ, ಓಂ ಪ್ರಕಾಶ್ ರಾಜ್‌ಭರ್ ಅವರ ಒಕ್ಕೂಟದಡಿಯಲ್ಲಿ ಬಿಜೆಪಿ ಮಿತ್ರ ಪಕ್ಷವಾಗಿ ರಾಜಕಾರಣಿ ಮುಖ್ತಾರ್ ಅನ್ಸಾರಿ ವಿರುದ್ಧ ಸ್ಪರ್ಧಿಸಿದ್ದರು. ಆದರೆ ಸುಮಾರು 6,000 ಮತಗಳಿಂದ ಸೋತರು.

ನೊಯ್ಡಾ, ಜೂನ್ 10: ಜಾನ್‌ಪುರದ ಆಶಾ ಪೂರ್ವಾ ಗ್ರಾಮದಲ್ಲಿ ಸುಹೇಲ್‌ದೇವ್ ಜಯಂತಿ ಆಚರಣೆಯ ಸಂದರ್ಭದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಸುಹೇಲ್‌ದೇವ್ ಸ್ವಾಭಿಮಾನ್ ಪಕ್ಷದ ಸದಸ್ಯ ಬ್ರಿಜೇಶ್ ರಾಜ್‌ಭರ್ ಅವರು ಪಕ್ಷದ ಮುಖ್ಯಸ್ಥ ಮಹೇಂದ್ರ ರಾಜ್‌ಭರ್ ಅವರಿಗೆ ಸ್ವಾಗತ ಕೋರಿ, ಕೊರಳಿಗೆ ಹಾರ ಹಾಕಿ ಕಪಾಳಮೋಕ್ಷ ಮಾಡಿದರು. ಈ ವಿಡಿಯೋದಲ್ಲಿರುವ ಸಂಪೂರ್ಣ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More