ದಿನಸಿ ಸಾಲ ವಾಪಾಸ್ ಕೇಳಿದ್ದಕ್ಕೆ ಅಂಗಡಿಗೇ ಬೆಂಕಿ ಹಚ್ಚಲು ಮುಂದಾದ ವ್ಯಕ್ತಿ! ಸಿಸಿಟಿವಿ ವಿಡಿಯೋದಿಂದಾಗಿ ಸಿಕ್ಕಿಬಿದ್ದ ಆರೋಪಿ
ದಿನಸಿ ಖರೀದಿ ಮಾಡಿದ್ದರ ಸಾಲ ವಾಪಸ್ ಕೊಡುವಂತೆ ಅಂಗಡಿ ಮಾಲೀಕ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಅಂಗಡಿಗೇ ಬೆಂಕಿಹಚ್ಚಲು ಯತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಆರೋಪಿಯು ಅಂಗಡಿ ಸಮೀಪದ ಫ್ಲೆಕ್ಸ್ಗೆ ಬೆಂಕಿಹಚ್ಚಿದ್ದಾನೆ. ಘಟನೆಯ ದೃಶ್ಯ ಸಿಸಿಟಿವಿಲಿ ಸೆರೆಯಾಗಿದ್ದು, ಇದರ ಆಧಾರದಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಮಂಗಳೂರು, ಜುಲೈ 11: ದಿನಸಿಯ ಸಾಲ ವಾಪಸ್ ಕೇಳಿದ್ದಕ್ಕೆ ವ್ಯಕ್ತಿಯೊಬ್ಬ ಅಂಗಡಿಗೇ ಬೆಂಕಿಹಚ್ಚಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ನಡೆದಿದೆ. ಸಿಸಿಟಿವಿಲಿ ಸೆರೆಯಾದ ದೃಶ್ಯದ ಆಧಾರದಲ್ಲಿ ಸದ್ಯ ಬೆಳ್ತಂಗಡಿ ಪೊಲೀಸರು ಆರೋಪಿ ಉಮೇಶ್ ಬಂಗೇರಾನನ್ನು ಬಂಧಿಸಿದ್ದಾರೆ. ಈ ಹಿಂದೆ ಹೋಟೆಲ್ ನಡೆಸುತ್ತಿದ್ದಾಗ ಉಮೇಶ್ ಬಂಗೇರಾ, ಗುರುವಾಯನಕೆರೆಯ ಸದಕತುಲ್ಲಾ ಎಂಬಾತನ ದಿನಸಿ ಅಂಗಡಿಯಿಂದ 38,000 ರೂ. ಸಾಲ ಪಡೆದಿದ್ದ. ದೂರವಾಣಿ ಕರೆ ಮಾಡಿದ್ದ ಸದಕತುಲ್ಲಾ, ಹಳೇ ಬಾಕಿ ತೀರಿಸುವಂತೆ ಆಗ್ರಹಿಸಿದ್ದ. ಇದರಿಂದ ಕೋಪಗೊಂಡ ಉಮೇಶ್ ಅಂಗಡಿ ಮುಂಭಾಗ ಹಾಕಿದ್ದ ಫ್ಲೆಕ್ಸ್ಗೆ ಬೆಂಕಿ ಹಾಕಿದ್ದಾನೆ. ಇದರಿಂದ 3 ಸಾವಿರ ನಷ್ಟ ಆಗಿದೆ ಎಂದು ಅಂಗಡಿ ಮಾಲೀಕ ದೂರು ನೀಡಿದ್ದರು.
Follow Us
Latest Videos
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ

