ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಅದ್ದೂರಿಯಾಗಿ ರಿಲೀಸ್ ಆಗಲಿದೆ. ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಚಿತ್ರ ಜನವರಿ 12ಕ್ಕೆ ತೆರೆಕಾಣಲಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಎರಡೂ ಸಿನಿಮಾಗಳಿಂದ ಭರ್ಜರಿ ಕಲೆಕ್ಷನ್ ನಿರೀಕ್ಷಿಸಲಾಗುತ್ತಿದೆ.
ಆಂಧ್ರ ಮತ್ತು ತೆಲಂಗಾಣದಲ್ಲಿ ಸಿನಿಮಾಗಳ ಟಿಕೆಟ್ ದರವನ್ನು ಏಕಾಏಕಿ ಹೆಚ್ಚಿಸಲು ಅವಕಾಶ ಇಲ್ಲ. ಆದರೆ ದೊಡ್ಡ ಸಿನಿಮಾಗಳು ಬಂದಾಗ ವಿಶೇಷ ಅನುಮತಿ ಪಡೆದು ಟಿಕೆಟ್ ದರ ಹೆಚ್ಚಿಸಲಾಗುತ್ತದೆ. ಈಗ ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ (The Raja Saab) ಹಾಗೂ ಮೆಗಾಸ್ಟಾರ್ ಚಿರಂಜೀವಿ ಅಭಿನಯದ ‘ಮನ ಶಂಕರ ವರಪ್ರಸಾದ್ ಗಾರು’ ಸಿನಿಮಾಗಳಿಗೆ ಅವಕಾಶ ಸಿಕ್ಕಿದೆ. ‘ದಿ ರಾಜಾ ಸಾಬ್’ ಸಿನಿಮಾ ಜನವರಿ 9ರಂದು ಬಿಡುಗಡೆ ಆಗಲಿದೆ. ಈ ಸಿನಿಮಾ ಮೇಲೆ ಅಭಿಮಾನಿಗಳಿಗೆ ಬಹಳಷ್ಟು ನಿರೀಕ್ಷೆ ಇದೆ. ಮಾರುತಿ ನಿರ್ದೇಶನದ ಈ ಚಿತ್ರದಲ್ಲಿ ಹಾರರ್ ಕಥಾಹಂದರ ಇದೆ. ಚಿರಂಜೀವಿ ಅವರ ‘ಮನ ಶಂಕರ ವರಪ್ರಸಾದ್ ಗಾರು’ (Mana Shankara Vara Prasad Garu) ಸಿನಿಮಾ ಜನವರಿ 12ಕ್ಕೆ ಬಿಡುಗಡೆ ಆಗಲಿದೆ. ಈ ಸಿನಿಮಾ ಕೂಡ ಸಾಕಷ್ಟು ಹೈಪ್ ಸೃಷ್ಟಿ ಮಾಡಿದೆ. ಟಿಕೆಟ್ ದರ ಹೆಚ್ಚಳ ಆಗಿರುವುದರಿಂದ ಭರ್ಜರಿ ಕಲೆಕ್ಷನ್ ನಿರೀಕ್ಷಿಸಲಾಗುತ್ತಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

