‘ಚೈತ್ರಾಗೆ ನೀನು ರನ್ನ, ಚಿನ್ನ, ಚಂದ್ರ ಅಂದ್ರೆ ಮುಗೀತು’: ಇದು ಗೋಲ್ಡ್ ಸುರೇಶ್ ಲೆಕ್ಕಾಚಾರ

Updated on: Oct 01, 2024 | 7:08 PM

ಚೈತ್ರಾ ಕುಂದಾಪುರ ಅವರು ಬಿಗ್​ ಬಾಸ್​ ಆಟದ ಆರಂಭದಲ್ಲೇ ರೆಬೆಲ್​ ಆಗಿದ್ದಾರೆ. ಜಗಳ ಜೋರಾಗಿದೆ. ಅವರ ಬಗ್ಗೆ ಗೋಲ್ಡ್​ ಸುರೇಶ್​ ಅವರಿಗೆ ಇರುವ ಅಭಿಪ್ರಾಯವೇ ಬೇರೆ. ಈ ಕುರಿತು ನರಕವಾಸಿಗಳಾದ ಮನಸಾ ಹಾಗೂ ಗೋಲ್ಡ್ ಸುರೇಶ್​ ಅವರು ಮಾತುಕಥೆ ಮಾಡಿದ್ದಾರೆ. ಎರಡೇ ದಿನದಲ್ಲಿ ಚೈತ್ರಾ ಕುಂದಾಪುರ ಅವರು ಹೈಲೈಟ್​ ಆಗಿದ್ದಾರೆ. ಹಲವರ ಜೊತೆ ಅವರು ಜಗಳ ಮಾಡಿದ್ದಾರೆ.

‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕಾರ್ಯಕ್ರಮದ ಮನೆಯನ್ನು ಸ್ವರ್ಗ ಮತ್ತು ನರಕ ಎಂದು ಎರಡು ಭಾಗ ಮಾಡಲಾಗಿದೆ. ಗೋಲ್ಡ್ ಸುರೇಶ್, ಚೈತ್ರಾ ಕುಂದಾಪುರ, ಮಾನಸಾ ಮುಂತಾದವರು ನರಕದಲ್ಲಿ ಇದ್ದಾರೆ. ಚೈತ್ರಾ ಅವರ ಬಗ್ಗೆ ಮಾನಸಾ ಮತ್ತು ಗೋಲ್ಡ್ ಸುರೇಶ್ ಕುಳಿತು ಮಾತನಾಡಿದ್ದಾರೆ. ‘ಚೈತ್ರಾನ ನಿಜಕ್ಕೂ ಕಂಟ್ರೋಲ್​ ಮಾಡೋಕೆ ಆಗಲ್ಲ. ಅವರ ಟ್ಯಾಲೆಂಟ್​ ಅರ್ಥ ಮಾಡಿಕೊಳ್ಳಿ. ಚೈತ್ರಾನ ಮೇಲಕ್ಕೆ ಹತ್ತಿಸಬೇಕು. ಮಾತಲ್ಲೇ ಮನೆ ಕಟ್ಟಿದರೆ ಹೌದೋ ಓಹ್ ಅಂತಾರೆ. ನೀನು ರನ್ನ, ಚಿನ್ನ, ಚಂದ್ರ, ಚಂದಮಾಮ ಎಂದರೆ ಮುಗಿಯಿತು. ನಮ್ಮ ಕಡೆ ಚೈತ್ರಾ, ಆ ಕಡೆ ಜಗದೀಶ್. ಇಬ್ಬರೂ ಸರಿಯಾಗಿದ್ದಾರೆ’ ಎಂದು ಗೋಲ್ಡ್​ ಸುರೇಶ್ ಹೇಳಿದ್ದಾರೆ. ಅವರ ಮಾತು ಕೇಳಿ ಮಾನಸಾ ನಕ್ಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More