ಮಂಡ್ಯ: ಸಾಹಿತ್ಯ ಸಮ್ಮೇಳನದಲ್ಲಿ ಚಲುವರಾಯಸ್ವಾಮಿ ಭರ್ಜರಿ ಡ್ಯಾನ್ಸ್​

Edited By:

Updated on: Dec 22, 2024 | 10:04 AM

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸಚಿವ ಚಲುವರಾಯಸ್ವಾಮಿ ಅವರು ಉತ್ಸಾಹದಿಂದ ನೃತ್ಯ ಮಾಡಿದ್ದು, ಶಾಸಕರಾದ ನರೇಂದ್ರ ಸ್ವಾಮಿ ಮತ್ತು ಗಣಿಗ ರವಿ ಅವರೂ ಸೇರಿ ಕುಣಿದರು. ಲಕ್ಷಾಂತರ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮ್ಮೇಳನದ ಯಶಸ್ಸನ್ನು ಆಚರಿಸುವ ಸಂಭ್ರಮದಲ್ಲಿ ಸಚಿವರು ಕುಣಿದರು.

ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಶನಿವಾರ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಸಂಗೀತ ಕಾರ್ಯಕ್ರಮದಲ್ಲಿ ಸಚಿವ ಚಲುವರಾಯಸ್ವಾಮಿ ಭರ್ಜರಿಯಾಗಿ ಡ್ಯಾನ್ಸ್​ ಮಾಡಿದರು. ಅಧ್ಯಕ್ಷ ಅಧ್ಯಕ್ಷ ಹಾಡಿಗೆ ಸಚಿವ ಚಲುವರಾಯಸ್ವಾಮಿ ಜೊತೆ, ಶಾಸಕರಾದ ನರೇಂದ್ರ ಸ್ವಾಮಿ, ಗಣಿಗ ರವಿ ಕುಣಿದು ಕುಪ್ಪಳಿಸಿದರು. ಕಾರ್ಯಕ್ರಮದಲ್ಲಿ ಲಕ್ಷಾಂತರ ಜನರು ಸೇರಿದ್ದರು. ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಅಭೂತಪೂರ್ವ ಯಶಸ್ಸು ಕಂಡ ಖುಷಿಗೆ ಸಚಿವ ಚಲುವರಾಯಸ್ವಾಮಿ ಕುಣಿದು ಕುಪ್ಪಳಿಸಿದರು.

Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More