AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪವಾಡಸದೃಶ ಪಾರಾದ ಮಂಡ್ಯದ 33 ಮಾಲಾಧಾರಿಗಳು

ಶಬರಿಮಲೆಗೆ ತೆರಳುತ್ತಿದ್ದ ಬಸ್ ಪಲ್ಟಿ: ಪವಾಡಸದೃಶ ಪಾರಾದ ಮಂಡ್ಯದ 33 ಮಾಲಾಧಾರಿಗಳು

ದಿಲೀಪ್​, ಚೌಡಹಳ್ಳಿ
| Edited By: |

Updated on: Nov 18, 2025 | 9:42 PM

Share

ಮಂಡ್ಯ ಜಿಲ್ಲೆಯ ಯಾಲದಹಳ್ಳಿ ಕೊಪ್ಪಲು ಗ್ರಾಮದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ ಕೇರಳದ ಎರುಮೇಲಿ ಬಳಿ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಬಸ್‌ನಲ್ಲಿದ್ದ 33 ಅಯ್ಯಪ್ಪ ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾದ ಭಕ್ತರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.

ಮಂಡ್ಯ, ನವೆಂಬರ್​ 18: ಶಬರಿಮಲೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದ್ದು, ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಯಾಲದಹಳ್ಳಿ ಕೊಪ್ಪಲು ಗ್ರಾಮದ 33 ಮಾಲಾಧಾರಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ನಡೆದಿದೆ. ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮೇಲಿ ಬಳಿ ಅಪಘಾತ ಸಂಭವಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.