Mandya Protest: ತಮಿಳುನಾಡಿಗೆ ನೀರು ಹರಿಸಲು CWRC ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ

Edited By:

Updated on: Jul 28, 2026 | 5:34 PM

ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ರೈತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸಿಡಬ್ಲ್ಯೂಆರ್​ಸಿ ಆದೇಶವನ್ನು ಖಂಡಿಸಿ ರೈತರು ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಅನ್ನದಾತರ ಗೋಳು ಕೇಳದ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ, ಕಾವೇರಿ ನೀರು ಬಿಡಬೇಡಿ ಎಂದು ಒತ್ತಾಯಿಸಿದರು.

ಮಂಡ್ಯ, ಜುಲೈ 28: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ ರೈತರು ತೀವ್ರ ಪ್ರತಿಭಟನೆ ನಡೆಸಿದ್ದಾರೆ. ಸಿಡಬ್ಲ್ಯೂಆರ್​ಸಿ ಆದೇಶವನ್ನು ಖಂಡಿಸಿ ರೈತರು ಮಂಡ್ಯದ ಸಂಜಯ್ ವೃತ್ತದಲ್ಲಿ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಅನ್ನದಾತರ ಗೋಳು ಕೇಳದ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ, ಕಾವೇರಿ ನೀರು ಬಿಡಬೇಡಿ ಎಂದು ಒತ್ತಾಯಿಸಿದರು.

ರೈತರಿಗೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಲ್ಲದೆ, ತಮಿಳುನಾಡಿನ ನೀರು ಕಟ್ಟಿ ರೀತಿ ವರ್ತನೆ ಮಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಧಿಕ್ಕಾರ ಕೂಗಿದರು. ಒಟ್ಟಾರೆ, ಕಾವೇರಿ ನೀರಿನ ಹಂಚಿಕೆ ವಿಷಯದಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ ಎಂದು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jul 28, 2026 04:30 PM
Loading...
Unable to load recommendations.
Follow Us