ಮಂಡ್ಯ: ಹಳ್ಳಿಕಾರ್ ತಳಿಯ ಹಸುಗಳಿಗೂ ನಡೀತು ಭರ್ಜರಿ ಸೀಮಂತ ಶಾಸ್ತ್ರ!

Edited By:

Updated on: Sep 15, 2025 | 10:07 AM

ಹಸುಗಳಿಗೆ ಎಲ್ಲಾದರೂ ಸೀಮಂತ ಶಾಸ್ತ್ರ ಮಾಡುವುದು ನೋಡಿದ್ದೀರಾ!? ಅದರಲ್ಲೂ, ಮನುಷ್ಯರಿಗೆ ಮಾಡುವಂತೆ ಸಂಪ್ರದಾಯಬದ್ಧವಾಗಿ ದನಗಳಿಗೆ ಸೀಮಂತ ಮಾಡುತ್ತಾರಾ? ಹೌದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ಹಳ್ಳಿಕಾರ್ ತಳಿಯ ಹಸುಗಳಿಗೂ ಭರ್ಜರಿಯಾಗಿ ಸೀಮಂತ ಶಾಸ್ತ್ರ ನೆರವೇರಿಸಿ ಜನರಿಗೆ ಹೋಳಿಗೆ ಊಟ ಬಡಿಸಲಾಗಿದೆ! ವಿಡಿಯೋ ಇಲ್ಲಿದೆ ನೋಡಿ.

ಮಂಡ್ಯ, ಸೆಪ್ಟೆಂಬರ್ 15: ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಗಂಜಾಮ್ ಗ್ರಾಮದಲ್ಲಿ ರೈತ ಕುಟುಂಬವೊಂದು ಹಳ್ಳಿಕಾರ್ ತಳಿಯ ಹಸುಗಳಿಗೆ ಸೀಮಂತ ಮಾಡಿ ಸಂಭ್ರಮಿಸಿದೆ. ಯುವ ರೈತ ಹೇಮಂತ್ ಎಂಬವರ ಮನೆಯಲ್ಲಿ, ಗರ್ಭಧರಿಸಿದ ಎರಡು ಹಸುಗಳಿಗೆ ಶಾಸ್ತ್ರೋಕ್ತವಾಗಿ ಸೀಮಂತ ಶಾಸ್ತ್ರ ನೇವೇರಿಸಲಾಯಿತು. ಹಸುಗಳ ಸೀಮಂತ ಶಾಸ್ತ್ರಕ್ಕೆ ನೆಂಟರಿಷ್ಟರು ಹಾಗೂ ಸ್ನೇಹಿತರನ್ನು ಕರೆದು ಒಬ್ಬಟ್ಟು ಊಟ ಹಾಕಿಸಿ ಹೇಮಂತ್ ಕುಟುಂಬದವರು ಸಂಭ್ರಮ ಪಟ್ಟರು. ಮನೆಯ ಮುಂದೆ ಶಾಮಿಯಾನ ಹಾಕಿಸಿ, ವೇದಿಕೆ ನಿರ್ಮಿಸಿ ಹಸುಗಳಿಗೆ ಅಲಂಕಾರ ಮಾಡಿ ಸೀಮಂತ ನೆರವೇರಿಸಿದರು. ತಟ್ಟೆ ತುಂಬುವ ಶಾಸ್ತ್ರದಿಂದ ಹಿಡಿದು ಆರತಿ ಬೆಳಗಿ ಸಂಪ್ರದಾಯದಂತೆ ಹಸುಗಳಿಗೆ ಸೀಮಂತ ಮಾಡಲಾಯಿತು. ಪದವಿ ಓದುತ್ತಿರುವ ಯುವ ರೈತ ಹೇಮಂರ್​​ಗೆ ಹಳ್ಳಿಕಾರ್ ತಳಿಯ ಹಸುಗಳ ಮೇಲೆ ವಿಪರೀತ ಪ್ರೀತಿ-ವ್ಯಾಮೋಹವಿದ್ದು, ಹಸುಗಳಿಗೆ ಕನಸು ಹಾಗೂ ನನಸು ಎಂದು ಹೆಸರಿಟ್ಟಿದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More