ಕೈದಿಗಳಿಗೆ ರಾಜಾತಿಥ್ಯ: ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಬಳ್ಳಾರಿಗೆ ವರ್ಗಾವಣೆ, ಟಿವಿ9 ವರದಿ ಬೆನ್ನಲ್ಲೇ ಕ್ರಮ

Edited By:

Updated on: Aug 31, 2026 | 10:46 AM

ಕೈದಿಗಳಿಗೆ ರಾಜಾತಿಥ್ಯ ಮತ್ತು ವಿಶೇಷ ಸೌಲಭ್ಯಗಳನ್ನು ನೀಡಿದ ಗಂಭೀರ ಆರೋಪದ ಮೇಲೆ ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ‘ಟಿವಿ9’ ನಿರಂತರ ವರದಿಯ ಬೆನ್ನಲ್ಲೇ ಡಿಜಿಪಿ ಅಲೋಕ್ ಕುಮಾರ್ ಈ ಆದೇಶ ಹೊರಡಿಸಿದ್ದಾರೆ. ಶಾಂತಮ್ಮ ಅವರ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ.

ಮಂಡ್ಯ, ಆಗಸ್ಟ್ 31: ಕೈದಿಗಳಿಗೆ ರಾಜಾತಿಥ್ಯ ನೀಡಿದ ಗಂಭೀರ ಆರೋಪದ ಮೇಲೆ ಮಂಡ್ಯ ಜೈಲು ಅಧೀಕ್ಷಕಿ ಶಾಂತಮ್ಮ ಅವರನ್ನು ತಕ್ಷಣವೇ ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿದೆ. ಅಕ್ರಮದ ಬಗ್ಗೆ ‘ಟಿವಿ9’ ನಿರಂತರವಾಗಿ ವರದಿ ಪ್ರಸಾರ ಮಾಡಿತ್ತು. ಇದರ ಬೆನ್ನಲ್ಲೇ, ರಾಜ್ಯ ಡಿಜಿಪಿ ಅಲೋಕ್ ಕುಮಾರ್ ಅವರು ಈ ಆದೇಶ ಹೊರಡಿಸಿದ್ದಾರೆ. ಮಂಡ್ಯದ ಆಸ್ಪತ್ರೆಯಲ್ಲಿ ವಿಚಾರಣಾಧೀನ ಕೈದಿಗೆ ವಿಶೇಷ ರಾಜಾತಿಥ್ಯವನ್ನು ನೀಡಲಾಗಿತ್ತು. ಅಷ್ಟೇ ಅಲ್ಲದೆ, ಆಸ್ಪತ್ರೆಯಲ್ಲಿದ್ದಾಗ ಕೈದಿ ಹುಸೇನ್ ತನ್ನ ಗೆಳತಿಯೊಂದಿಗೆ ಸಿಕ್ಕಿಬಿದ್ದ ಘಟನೆಯೂ ಈ ಸಂದರ್ಭದಲ್ಲಿ ಬೆಳಕಿಗೆ ಬಂದಿತ್ತು. ಜೈಲಿನೊಳಗೆ ಕೈದಿಗಳಿಗಾಗಿ ವಿಶೇಷ ವ್ಯವಸ್ಥೆಗಳನ್ನು ಕಲ್ಪಿಸಲು ಪ್ರತ್ಯೇಕ ದರಗಳನ್ನು ನಿಗದಿಪಡಿಸಿದ್ದು ಕೂಡ ಈ ತನಿಖೆಯಲ್ಲಿ ಬಯಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us