ಮಂಡ್ಯದಲ್ಲಿ ಮುಂದುವರಿದ ಜೆಡಿಎಸ್-ಬಿಜೆಪಿ ಮೈತ್ರಿ ಮುನಿಸು; ಜೆಡಿಎಸ್ ಫ್ಲೆಕ್ಸ್ಗಳಲ್ಲಿ ಬಿಜೆಪಿ ನಾಯಕರ ಫೋಟೋಗೆ ಇಲ್ಲ ಸ್ಥಾನ!
ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಮುನಿಸು ಮುಂದುವರಿದಿದೆ. ಇತ್ತೀಚೆಗೆ ನಡೆದ ‘ಖೇಲೋ ಇಂಡಿಯಾ ವೈಬ್ರೆಂಟ್ ಮಂಡ್ಯ’ ಕಾರ್ಯಕ್ರಮವು ಮೈತ್ರಿ ಪಕ್ಷಗಳ ನಡುವಿನ ಬಿರುಕನ್ನು ಮತ್ತಷ್ಟು ಎತ್ತಿ ತೋರಿಸಿದೆ. ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಜೆಡಿಎಸ್ ಫ್ಲೆಕ್ಸ್ಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋ ಹೊರತುಪಡಿಸಿ ರಾಜ್ಯ ಬಿಜೆಪಿ ನಾಯಕರ ಯಾವುದೇ ಫೋಟೋಗಳನ್ನು ಹಾಕಿರಲಿಲ್ಲ.
ಮಂಡ್ಯ, ಮಾರ್ಚ್ 15: ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಮುನಿಸು ಮುಂದುವರಿದಿದೆ. ಇತ್ತೀಚೆಗೆ ನಡೆದ ‘ಖೇಲೋ ಇಂಡಿಯಾ ವೈಬ್ರೆಂಟ್ ಮಂಡ್ಯ’ ಕಾರ್ಯಕ್ರಮವು ಮೈತ್ರಿ ಪಕ್ಷಗಳ ನಡುವಿನ ಬಿರುಕನ್ನು ಮತ್ತಷ್ಟು ಎತ್ತಿ ತೋರಿಸಿದೆ. ಮಂಡ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಜೆಡಿಎಸ್ ಫ್ಲೆಕ್ಸ್ಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಫೋಟೋ ಹೊರತುಪಡಿಸಿ ರಾಜ್ಯ ಬಿಜೆಪಿ ನಾಯಕರ ಯಾವುದೇ ಫೋಟೋಗಳನ್ನು ಹಾಕಿರಲಿಲ್ಲ.
ಈ ನಡೆ ಸ್ಥಳೀಯ ಬಿಜೆಪಿ ನಾಯಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಜೆಡಿಎಸ್ ಮುಖಂಡರು ರಾಜ್ಯ ಬಿಜೆಪಿ ನಾಯಕರನ್ನು ತಮ್ಮ ಫ್ಲೆಕ್ಸ್ಗಳಿಂದ ಹೊರಗಿಟ್ಟಿರುವುದು, ಮೈತ್ರಿ ಒಳಗೆ ಭಿನ್ನಾಭಿಪ್ರಾಯಗಳನ್ನು ಸ್ಪಷ್ಟವಾಗಿ ಸೂಚಿಸುತ್ತಿದೆ ಎನ್ನಲಾಗುತ್ತಿದೆ. ಜೆಡಿಎಸ್ ನಾಯಕರ ಈ ನಡೆಯಿಂದ ಮಂಡ್ಯದ ಬಿಜೆಪಿ ಮುಖಂಡರು ಸಹ ಜೆಡಿಎಸ್ ನಾಯಕರ ವಿರುದ್ಧ ಮುನಿಸುಗೊಂಡಿದ್ದಾರೆ. ಈ ಘಟನೆಯು ಮಂಡ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಭವಿಷ್ಯದ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
