ಮಂಡ್ಯ: ಲಂಚ ಕೊಟ್ಟ ಹಣ ವಾಪಸ್ ಕೊಡುವಂತೆ ಪಿಡಿಒ ಬೆನ್ನುಬಿದ್ದ ಭೂಪ! ವಿಡಿಯೋ ವೈರಲ್

Edited By:

Updated on: Aug 06, 2025 | 10:43 AM

ಮಂಡ್ಯ ಜಿಲ್ಲೆಯ ಲಂಚ ಪ್ರಕರಣವೊಂದಕ್ಕೆ ಸಂಬಂಧಿಸಿದ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಕೆ.ಆರ್.ಪೇಟೆ ತಾಲೂಕಿನ ಮಂದೆಗೆರೆ ಗ್ರಾಮದಲ್ಲಿ ಪಿಡಿಒ 15 ಸಾವಿರ ರೂ. ಲಂಚ ಪಡೆದು ಕೆಲಸ ಮಾಡಿಲ್ಲ ಎಂದು ಆರೋಪಿಸಿದ ಗ್ರಾ.ಪಂ ಸದಸ್ಯ ನಡುರಸ್ತೆಯಲ್ಲೇ ಪಿಡಿಒ ಅಡ್ಡಗಟ್ಟಿ ಹಣ ವಾಪಸ್ ಕೇಳಿದ್ದಾರೆ.

ಮಂಡ್ಯ, ಆಗಸ್ಟ್ 6: ಲಂಚ ಕೊಟ್ಟ ಹಣವನ್ನು ವಾಪಸ್ ಕೊಡಿ ಎಂದು ವ್ಯಕ್ತಿಯೊಬ್ಬರು ಪಿಡಿಒ ಬೆನ್ನುಬಿದ್​ದ ವಿಡಿಯೋ ವೈರಲ್ ಆಗಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಮಂದೆಗೆರೆ ಗ್ರಾಮದಲ್ಲಿ ಘಟನೆ ನಡೆದಿದ್ದು, ಉದ್ಯೋಗ ಖಾತ್ರಿ ಬಿಲ್ ಪಾವತಿಗೆ ಗ್ರಾ.ಪಂ ಸದಸ್ಯ ಜಗದೀಶ್ ಎಂಬವರು ಪಿಡಿಒ ಸುವರ್ಣ ಎಂಬವರಿಗೆ 15 ಸಾವಿರ ರೂ. ಲಂಚ ಕೊಟ್ಟಿದ್ದರು ಎನ್ನಲಾಗಿದೆ. ಲಂಚ ಕೊಟ್ಟ ಬಳಿಕವೂ ಕೆಲಸ ಆಗಿಲ್ಲ ಎಂದು ಜಗದೀಶ್ ನಡುರಸ್ತೆಯಲ್ಲಿ ಪಿಡಿಒರನ್ನು ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ವಿಡಿಯೋ ಸಹ ರೆಕಾರ್ಡ್ ಮಾಡಿದ್ದಾರೆ. ಮತ್ತೊಂದೆಡೆ, ಹಣಕ್ಕೆ ಬಿಗಿಪಟ್ಟು ಹಿಡಿದ ಸದಸ್ಯ ಕೂಡ ಕಾಮಗಾರಿಯಲ್ಲಿ ಅಕ್ರಮ ಎಸಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಲಂಚ ಪಡೆದ ಆರೋಪವನ್ನು ಪಿಡಿಒ ಸುವರ್ಣ ಅಲ್ಲಗಳೆದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More