KSRTC ಬಸ್ ಅಪಘಾತ, ಪವಾಡ ಸದೃಶ್ಯ ರೀತಿಯಲ್ಲಿ ಪಾರಾದ ಬೈಕ್ ಸವಾರ
ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವಿಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಿಂದ ಸವಾರ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾನೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಂಡ್ಯದ ಸಾಂಜೋ ಆಸ್ಪತ್ರೆ ಬಳಿಯ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತ ದೃಶ್ಯ ಹೆದ್ದಾರಿಯಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ ಸರ್ವಿಸ್ ರಸ್ತೆಯಲ್ಲಿ ನಿಂತಿದ್ದ ಕಂಟೈನರ್ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಇದೇ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಬೈಕ್ ಸವಾರ ಪವಾಡ ಸದೃಶ್ಯ ರೀತಿಯಲ್ಲಿ ಪಾರಾಗಿದ್ದಾನೆ.
Loading...
Unable to load recommendations.
Follow Us