ಮಂಡ್ಯ ಮದ್ದೂರಿನಲ್ಲಿ ಮತ್ತೆ ಕಲ್ಲು ತೂರಾಟ: ಪ್ರತಿಭಟನಾಕಾರರ ಅಟ್ಟಾಡಿಸಿ ಲಾಠಿ ಬೀಸಿದ ಪೊಲೀಸರು, ವಿಡಿಯೋ ನೋಡಿ

Edited By:

Updated on: Sep 08, 2025 | 11:55 AM

ಮಂಡ್ಯ ಜಿಲ್ಲೆಯ ಮದ್ದೂರಿನ ರಾಮ್ ರಹೀಮ್ ನಗರ ಸದ್ಯ ಪ್ರಕ್ಷುಬದ್ಧಗೊಂಡಿದೆ. ಗಣೇಶ ವಿಸರ್ಜನೆ ವೇಳೆ ನಡೆದ ಕಲ್ಲುತೂರಾಟ ಇದೀಗ ಪರಿಸ್ಥಿತಿ ಬಿಗಡಾಯಿಸುವಂತೆ ಮಾಡಿದ್ದು, ಸೋಮವಾರ ಬೆಳಗ್ಗೆ ಭಾರಿ ಪ್ರತಿಭಟನೆ ನಡೆದಿದೆ. ಈ ವೇಳೆ ಮತ್ತೆ ಕಲ್ಲು ತೂರಾಟ ನಡೆದು, ಪೊಲೀಸರು ಲಾಠಿಚಾರ್ಜ್ ಮಾಡಿದರು. ಪ್ರತಿಭಟನಾಕಾರರನ್ನು ಪೊಲೀಸರು ಅಟ್ಟಾಡಿಸಿ ಹೊಡೆದ ವಿಡಿಯೋ ಇಲ್ಲಿದೆ.

ಮಂಡ್ಯ, ಸೆಪ್ಟೆಂಬರ್ 8: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಭಾನುವಾರ ರಾತ್ರಿ ಕಲ್ಲೆಸೆತ ನಡೆದಿರುವುದಕ್ಕೆ ಹಿಂದೂಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಘಟನೆ ಖಂಡಿಸಿ ಸೋಮವಾರ ಬೆಳಗ್ಗೆ ರಾಮ್ ರಹೀಮ್ ನಗರದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮತ್ತೆ ಕಲ್ಲು ತೂರಾಟ ನಡೆಯಿತು. ಪರಿಸ್ಥಿತಿ ತಿಳಿಗೊಳಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More