ಬಿಜೆಪಿಗೆ ಸುಮಲತಾ ಅಂಬರೀಷ್ ಪಕ್ಷ ಸೇರಲೆಂಬ ತವಕ, ಆದರೆ ಸಂಸದೆಗೆ ಅಂಥ ಆತುರವೇನೂ ಇಲ್ಲ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 04, 2023 | 3:18 PM

ಬೆಂಗಳೂರಲ್ಲಿ ಪತ್ರಕರ್ತರೊಂದಿಗೆ ಮಾತಾಡಿದ ಸಂಸದೆ ತಾನಿನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ; ಆಪ್ತರೊಂದಿಗೆ ಬೆಂಬಲಿಗರೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುವುದಾಗಿ ಹೇಳಿದರು.

ಬೆಂಗಳೂರು: ಸಂಸತ್ ಸದಸ್ಯೆ ಸುಮಲತಾ ಅಂಬರೀಷ್ (Sumalatha Ambareesh) ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಬಿಜೆಪಿ (BJP) ಇನ್ನಿಲ್ಲದ ಕಸರತ್ತು ನಡೆಸಿದೆ. ಆದರೆ ಸುಮಲತಾ ಮಾತ್ರ ಕಳೆದ 6 ತಿಂಗಳಿಂದ ಯಾವುದೇ ತೀರ್ಮಾನ ಪ್ರಕಟಿಸದೆ ಸುಮ್ಮನಿದ್ದಾರೆ. ಕಾಂಗ್ರೆಸ್ ಪಕ್ಷದ ಸದಸ್ಯರು ಸಹ ಸುಮಲತಾ ಅವರು ತಮ್ಮೊಂದಿಗೆ ಬರಲಿ ಅಂತ ಹಾತೊರೆಯುತ್ತಿದ್ದಾರೆ. ಬೆಂಗಳೂರಲ್ಲಿ ಇಂದು ಹಿರಿಯ ಮುತ್ಸದ್ದಿ ಹಾಗೂ ಬಿಜೆಪಿ ನಾಯಕ ಎಸ್ ಎಂ ಕೃಷ್ಣ (SM Krishna) ಅವರನ್ನು ಭೇಟಯಾದ ಸಂಸದೆ ಬಳಿಕ ಪತ್ರಕರ್ತರೊಂದಿಗೆ ಮಾತಾಡಿ ತಾನಿನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ; ಆಪ್ತರೊಂದಿಗೆ ಬೆಂಬಲಿಗರೊಂದಿಗೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 04, 2023 03:17 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.