Sumalatha Ambareesh Pressmeet Highlights: ಬಿಜೆಪಿಗೆ ನನ್ನ ಸಂಪೂರ್ಭ ಬೆಂಬಲ: ಸುಮಲತಾ ಅಂಬರೀಶ್​

Updated on: Mar 10, 2023 | 5:45 PM

ಇಂದು ತಮ್ಮ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವೇ ಎಂದು ಹೇಳಿದ್ದಾರೆ.  

ಬೆಂಗಳೂರು: ಕರ್ನಾಟಕ ರಾಜಕೀಯ ಕುರುಕ್ಷೇತ್ರದಲ್ಲಿ ಅತಿದೊಡ್ಡ ಕ್ರಾಂತಿಗೆ ಅಖಾಡ ಸಜ್ಜಾಗಿದೆ. ಮಂಡ್ಯ ಅಂದ್ರೆ ಇಂಡಿಯಾ, ಇಂಡಿಯಾ ಅಂದ್ರೆ ಮಂಡ್ಯ ಎನ್ನುವ ಲೆವೆಲ್‌ಗೆ ಸದ್ದು ಮಾಡಿರುವ ಮಂಡ್ಯ ಕುರುಕ್ಷೇತ್ರ, ಮತ್ತೊಂದು ರಣಯುದ್ಧಕ್ಕೆ ಸಜ್ಜಾಗಿದೆ. ಅದಕ್ಕೆ ಕಾರಣವೇ ಸುಮಲತಾ ಬಿಜೆಪಿ ತಮ್ಮ ಸಂಪೂರ್ಣ ಬೆಂಬಲ ನೀಡಿದ್ದಾರೆ.  ಹೌದು.. ಅಂದು ಮಂಡ್ಯ ರಾಜಕೀಯ ಇಂಡಿಯಾದಲ್ಲೇ ಕಂಪನ ಎಬ್ಬಿಸಿತ್ತು. ಅಂಬಿ ಅಗಲಿಕೆಯ ಅನುಕಂಪದಲ್ಲೇ ಸೆರೆಗೊಡ್ಡಿ ಮತ ಕೇಳಿದ್ದ ಸುಮಲತಾ ಅಂಬರೀಶ್​ ಇದೀಗ ಮತ್ತೊಂದು ರಾಜಕೀಯ ಬಿರುಗಾಳಿ ಎಬ್ಬಿಸಿದ್ದಾರೆ. ಪಕ್ಷೇತರ ಬಿಟ್ಟು ಬಿಜೆಪಿ ಪಕ್ಷಕ್ಕೆ ಹಾರುವುದಕ್ಕೆ ಸುಮಲತಾ ಅಂಬರೀಶ್ ತುದಿಗಾಲಲ್ಲಿ ನಿಂತಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಇಂದು ತಮ್ಮ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುವೇ ಎಂದು ಹೇಳಿದ್ದಾರೆ.

Published on: Mar 10, 2023 12:52 PM
Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More