ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ
ಮಂಡ್ಯ ಜಿಲ್ಲೆಯ ಪಾಂಡವಪುರ ಪುರಸಭೆ ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ. ಆಶ್ರಯ ಯೋಜನೆಯಡಿ ಸೈಟ್ ಹಂಚಿಕೆಯಲ್ಲಿ ಗೋಲ್ಮಾಲ್ ಜರುಗಿದೆ. ನಕಲಿ ಹಕ್ಕುಪತ್ರ ಸೃಷ್ಟಿ ಮಾಡಿ ಒಂದೇ ಸೈಟ್ನ್ನು ಹಲವರಿಗೆ ಮಾರಾಟ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಮಂಡ್ಯ ಜಿಲ್ಲೆಯ ಪಾಂಡವಪುರ ಪುರಸಭೆ ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ. ಆಶ್ರಯ ಯೋಜನೆಯಡಿ ಸೈಟ್ ಹಂಚಿಕೆಯಲ್ಲಿ ಗೋಲ್ಮಾಲ್ ಜರುಗಿದೆ. ನಕಲಿ ಹಕ್ಕುಪತ್ರ ಸೃಷ್ಟಿ ಮಾಡಿ ಒಂದೇ ಸೈಟ್ನ್ನು ಹಲವರಿಗೆ ಮಾರಾಟ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ಹಳ್ಳಿಯ ಮುಗ್ಧ ಜನರು ಏನೂ ತಿಳಿಯುವುದಿಲ್ಲ ಎಂದು ಭಾವಿಸಿ, ಸಾವಿರಾರು ಸೈಟ್ಗಳನ್ನು ಮಾರಾಟ ಮಾಡಿದ್ದಾರೆ.
ಒಂದೇ ನಿವೇಶನವನ್ನು ಇಬ್ಬರಿಂದ ಮೂವರಿಗೆ ಮಾರಾಟ ಮಾಡಿ ವಂಚಿಸಿದ್ದಾರೆ. ಈ ಬಗ್ಗೆ ಮೂಲ ನಿವೇಶನದಾರರಿಗೆ ಮಾಹಿತಿ ಇಲ್ಲದೇ ನಿವೇಶನ ಮಾರಾಟ ಮಾಡಿದ್ದಾರೆ.
ಹಣ ನೀಡಿ ನಿವೇಶನ ಖರೀದಿಸಿದವರಿಗೂ ಆತಂಕ ಹೆಚ್ಚಾಗಿದೆ, ದಂಧೆಕೋರರ ವಂಚನೆ ವಿಚಾರ ತಿಳಿದು ಶಾಸಕರೇ ಕಂಗಾಲಾಗಿದ್ದಾರೆ. ಹಲವು ವರ್ಷಗಳಿಂದ ಸಾವಿರಾರು ಸೈಟ್ಗಳನ್ನು ವಂಚಕರು ಮಾರಾಟ ಮಾಡಿದ್ದಾರೆ. ಅಕ್ರಮದಲ್ಲಿ ಪುರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ನಿವೇಶನ ಗೋಲ್ಮಾಲ್ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ. ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ್ಗೆ ಪತ್ರ ಬರೆದಿದ್ದು, ಈ ಕುರಿತು ಶಾಸಕರ ದೂರಿನ ಮೇರೆಗೆ ಸಿಐಡಿ ತನಿಖೆ ಆರಂಭಿಸಿದ್ದಾರೆ. ಎನ್ಒಸಿ ಇದ್ದರೆ ಮಾತ್ರ ಸೈಟ್ ರಿಜಿಸ್ಟರ್ ಮಾಡುವಂತೆ ಸಬರಿಜಿಸ್ಟ್ರಾರ್ಗೆ ದರ್ಶನ್ ಪುಟ್ಟಣಯ್ಯ ಸೂಚನೆ ನೀಡಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
