ಮಂಡ್ಯ: ಪಾಂಡವಪುರ ಪುರಸಭೆ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ

Edited By:

Updated on: Nov 15, 2024 | 9:52 AM

ಮಂಡ್ಯ ಜಿಲ್ಲೆಯ ಪಾಂಡವಪುರ ಪುರಸಭೆ ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ. ಆಶ್ರಯ ಯೋಜನೆಯಡಿ ಸೈಟ್ ಹಂಚಿಕೆಯಲ್ಲಿ ಗೋಲ್​ಮಾಲ್ ಜರುಗಿದೆ. ನಕಲಿ ಹಕ್ಕುಪತ್ರ ಸೃಷ್ಟಿ ಮಾಡಿ ಒಂದೇ ಸೈಟ್​ನ್ನು ಹಲವರಿಗೆ ಮಾರಾಟ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಮಂಡ್ಯ ಜಿಲ್ಲೆಯ ಪಾಂಡವಪುರ ಪುರಸಭೆ ನಿವೇಶನ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ. ಆಶ್ರಯ ಯೋಜನೆಯಡಿ ಸೈಟ್ ಹಂಚಿಕೆಯಲ್ಲಿ ಗೋಲ್​ಮಾಲ್ ಜರುಗಿದೆ. ನಕಲಿ ಹಕ್ಕುಪತ್ರ ಸೃಷ್ಟಿ ಮಾಡಿ ಒಂದೇ ಸೈಟ್​ನ್ನು ಹಲವರಿಗೆ ಮಾರಾಟ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಹಳ್ಳಿಯ ಮುಗ್ಧ ಜನರು ಏನೂ ತಿಳಿಯುವುದಿಲ್ಲ ಎಂದು ಭಾವಿಸಿ, ಸಾವಿರಾರು ಸೈಟ್​ಗಳನ್ನು ಮಾರಾಟ ಮಾಡಿದ್ದಾರೆ.
ಒಂದೇ ನಿವೇಶನವನ್ನು ಇಬ್ಬರಿಂದ ಮೂವರಿಗೆ ಮಾರಾಟ ಮಾಡಿ ವಂಚಿಸಿದ್ದಾರೆ. ಈ ಬಗ್ಗೆ ಮೂಲ ನಿವೇಶನದಾರರಿಗೆ ಮಾಹಿತಿ ಇಲ್ಲದೇ ನಿವೇಶನ ಮಾರಾಟ ಮಾಡಿದ್ದಾರೆ.

ಹಣ ನೀಡಿ ನಿವೇಶನ ಖರೀದಿಸಿದವರಿಗೂ ಆತಂಕ ಹೆಚ್ಚಾಗಿದೆ, ದಂಧೆಕೋರರ ವಂಚನೆ ವಿಚಾರ ತಿಳಿದು ಶಾಸಕರೇ ಕಂಗಾಲಾಗಿದ್ದಾರೆ. ಹಲವು ವರ್ಷಗಳಿಂದ ಸಾವಿರಾರು ಸೈಟ್​ಗಳನ್ನು ವಂಚಕರು ಮಾರಾಟ ಮಾಡಿದ್ದಾರೆ. ಅಕ್ರಮದಲ್ಲಿ ಪುರಸಭೆ ಅಧಿಕಾರಿಗಳು, ಜನಪ್ರತಿನಿಧಿಗಳು ಶಾಮೀಲಾಗಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ನಿವೇಶನ ಗೋಲ್​ಮಾಲ್ ಬಗ್ಗೆ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ಪತ್ರ ಬರೆಯಲಾಗಿದೆ. ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮನವಿ ಮಾಡಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ್​ಗೆ ಪತ್ರ ಬರೆದಿದ್ದು, ಈ ಕುರಿತು ಶಾಸಕರ ದೂರಿನ ಮೇರೆಗೆ ಸಿಐಡಿ ತನಿಖೆ ಆರಂಭಿಸಿದ್ದಾರೆ. ಎನ್​ಒಸಿ ಇದ್ದರೆ ಮಾತ್ರ ಸೈಟ್ ರಿಜಿಸ್ಟರ್ ಮಾಡುವಂತೆ ಸಬರಿಜಿಸ್ಟ್ರಾರ್​ಗೆ ದರ್ಶನ್ ಪುಟ್ಟಣಯ್ಯ ಸೂಚನೆ ನೀಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More