ಮಂಡ್ಯ ರಸ್ತೆ ಅಪಘಾತದಲ್ಲಿ ಮಗುವಿನ ಸಾವು, ಮೂವರು ಎಎಸ್​ಐಗಳನ್ನು ಸಸ್ಪೆಂಡ್ ಮಾಡಿದ ಪೊಲೀಸ್ ವರಿಷ್ಠಾಧಿಕಾರಿ

ಅರುಣ್​ ಕುಮಾರ್​ ಬೆಳ್ಳಿ

Updated on: May 26, 2025 | 5:05 PM

ಮಗುವಿನ ಸಾವಿಗೆ ಪೊಲೀಸ್ ಸಿಬ್ಬಂದಿಯ ಅಚಾತುರ್ಯ ಮೇಲ್ನೋಟಕ್ಕೆ ಕಾಣುತ್ತಿರುವುದರಿಂದ ಎಎಸ್​​ಐಗಳಾದ, ಜಯರಾಮ, ನಾಗರಾಜ ಮತ್ತು ಗುರುದೇವ್-ಮೂವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮಲ್ಲಿಕಾರ್ಜುನ ಬಾಲದಂಡಿ ಹೇಳಿದರು. ಸಂಚಾರಿ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವಾಹನ ಚಾಲಕರು ಮೇಲ್ನೋಟಕ್ಕೆ ಅಪರಾಧವೆಸಗುತ್ತಿದ್ದಾರೆ ಅಂತ ಕಂಡುಬಂದಲ್ಲಿ ಮಾತ್ರ ವಾಹನಗಳನ್ನು ತಡೆಯುವಂತೆ ಸೂಚಿಸಲಾಗಿದೆ ಎಂದು ಎಸ್​ಪಿ ಹೇಳಿದರು.

ಮಂಡ್ಯ, ಮೇ 26: ನಾಯಿ ಕಚ್ಚಿದ್ದ ತಮ್ಮ ಮಗುವನ್ನು ಚಿಕಿತ್ಸೆಗೆಂದು ಪೋಷಕರು ಮದ್ದೂರು ನಿಂದ ಮಂಡ್ಯ ಜಿಲ್ಲಾಸ್ಪತ್ರೆಗೆ ಬೈಕ್ ಮೇಲೆ ಕರೆತರುತ್ತಿದ್ದಾಗ ಮಂಡ್ಯ ಸಂಚಾರಿ ಪೊಲೀಸರಿಂದ ಆದ ಎಡವಟ್ಟಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ವಿಷಾದ ವ್ಯಕ್ತಪಡಿಸಿದ್ದಾರೆ ಮತ್ತು ತಪ್ಪಿತಸ್ಥ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ. ಮಿಮ್ಸ್ ಮುಂದೆ ಮಗುವಿನ ಪೋಷಕರು ಮತ್ತ್ತು ಸಂಬಂಧಿಕರು ಶವವನ್ನಿಟ್ಟುಕೊಂಡಡು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾಗ ಎಸ್ ಪಿ ಸ್ಥಳಕ್ಕೆ ಆಗಮಿಸಿ ಅವರಿಗೆ ಸಾಂತ್ವನ ಹೇಳಿದರು. ಮಾಧ್ಯಮದವರೊಂದಿಗೆ ಮಾತಾಡುವಾಗ ಎಸ್​​ಪಿ, ಮಗುವಿನ ಸಾವಿಗೆ ಸರ್ಕಾರದಿಂದ ಸೂಕ್ತ ಪರಿಹಾರ ಸಿಗಬೇಕೆನ್ನುವುದು ಕುಟುಂಬಸ್ಥರ ಬೇಡಿಕೆಯನ್ನು ತಾನು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿರುವುದಾಗಿ ಹೇಳಿದರು.

ಇದನ್ನೂ ಓದಿ: ಮಂಡ್ಯ: ನಾಪತ್ತೆಯಾಗಿದ್ದ ಪದ್ಮಶ್ರೀ ಪುರಸ್ಕೃತ ಕೃಷಿ ವಿಜ್ಞಾನಿ ಸುಬ್ಬಣ್ಣ ಅಯ್ಯಪ್ಪನ್ ಶವವಾಗಿ ಪತ್ತೆ  

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.