Gambling: ಮಂಡ್ಯ ಜಿಲ್ಲೆಯಲ್ಲಿ ಯುಗಾದಿ ಹಬ್ಬವನ್ನು ನೆಪವಾಗಿಟ್ಟುಕೊಂಡು ಜೂಜಾಟದಲ್ಲಿ ತೊಡಗಿದರೆ ಕಠಿಣ ಕ್ರಮ, ಎಸ್ ಪಿ ಎಚ್ಚರಿಕೆ

ಅರುಣ್​ ಕುಮಾರ್​ ಬೆಳ್ಳಿ

Updated on: Mar 22, 2023 | 10:35 AM

ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎನ್ ಸತೀಶ್, ನಾಗರಿಕರು ಜೂಜಾಟದಲ್ಲಿ ತೊಡಗಿದ್ದು ಕಂಡುಬಂದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದೆಂದು ಮೈಕ್ ಮೂಲಕ ತಮ್ಮ ಸಿಬ್ಬಂದಿಯಿಂದ ಅನೌನ್ಸ್ ಮಾಡಿಸುತ್ತಿದ್ದಾರೆ.

ಮಂಡ್ಯ: ಇದು ನಿಜಕ್ಕೂ ಒಳ್ಳೆಯ ಕ್ರಮ ಮಾರಾಯ್ರೇ. ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಯುಗಾದಿ ಹಬ್ಬದ (Ugadi Festival) ಸಂದರ್ಭದಲ್ಲಿ ಜೂಜಾಡುತ್ತಾರೆ (gambling). ಈ ಆಟದಲ್ಲಿ ಹಣ ಗೆದ್ದವನು ಬೀಗುತ್ತಾ ಮನೆಗೆ ಹೋಗಿ ಹೆಂಡತಿ ಮಕ್ಕಳೊಂದಿಗೆ ಹಬ್ಬದೂಟ ಸವಿಯತ್ತಾನೆ. ಅದರೆ ಸೋತವನು ಹ್ಯಾಪುಮೋರೆ ಹಾಕ್ಕೊಂಡು ತನ್ನದಲ್ಲದೆ ಮನೆಯಲ್ಲಿರುವವರೆಲ್ಲರ ಮೂಡು, ಸಂಭ್ರಮ ಹಾಳುಮಾಡುತ್ತಾನೆ. ಮಂಡ್ಯ ಜಿಲ್ಲಾ ಪೊಲೀಸ್ ಜಿಲ್ಲೆಯಾದ್ಯಂತ ಇಂದು ಮತ್ತು ನಾಳೆ ಇಸ್ಪೀಟ್ ಆಡುವುದನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾರೆ. ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಎನ್ ಸತೀಶ್ (N Satish), ನಾಗರಿಕರು ಜೂಜಾಟದಲ್ಲಿ ತೊಡಗಿದ್ದು ಕಂಡುಬಂದರೆ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದೆಂದು ಮೈಕ್ ಮೂಲಕ ತಮ್ಮ ಸಿಬ್ಬಂದಿಯಿಂದ ಅನೌನ್ಸ್ ಮಾಡಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ  ಸುದ್ದಿಗಳಿಗಾಗಿ  ಇಲ್ಲಿ ಕ್ಲಿಕ್ ಮಾಡಿ

https://www.youtube.com/@tv9kannada/videos

Published on: Mar 22, 2023 10:35 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.