AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಹಣ ಹಂಚಿಕೆ ವಿಚಾರವಾಗಿ ಮಂಗಳಮುಖಿಯರ ನಡುವೆ ಮಾರಾಮಾರಿ

Video: ಹಣ ಹಂಚಿಕೆ ವಿಚಾರವಾಗಿ ಮಂಗಳಮುಖಿಯರ ನಡುವೆ ಮಾರಾಮಾರಿ

ಅಕ್ಷಯ್​ ಪಲ್ಲಮಜಲು​​
|

Updated on:Nov 29, 2025 | 10:13 AM

Share

ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದಲ್ಲಿ ಹಣ ಹಂಚಿಕೆ ವಿಚಾರಕ್ಕೆ ಮಂಗಳಮುಖಿಯರ ಎರಡು ಗುಂಪುಗಳ ನಡುವೆ ನಡೆದ ಭೀಕರ ಗಲಾಟೆ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಮಾರಾಮಾರಿಯಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ ಹಾಗೂ ವಸ್ತುಗಳಿಗೆ ಹಾನಿಯನ್ನುಂಟು ಮಾಡಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

ಮಂಡ್ಯ, ನ.29: ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದಲ್ಲಿ ಮಂಗಳಮುಖಿಯರ (Mandya transgender fight) ನಡುವೆ ಬಿಗ್​​​ ಫೈಟ್​​​​​​ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಹಣ ಹಂಚಿಕೆ ವಿಚಾರಕ್ಕೆ ಮೈಸೂರು ಮತ್ತು ಮಂಡ್ಯದ ಮಂಗಳಮುಖಿಯರ ಗುಂಪುಗಳ ಮಧ್ಯೆ ಗಲಾಟೆ​ ನಡೆದಿದೆ. ಎರಡು ಕಡೆಯವರು ಸಾರ್ವಜನಿಕ ಸ್ಥಳದಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಂದ ಮನಬಂದಂತೆ ಬಡಿದಾಡಿಕೊಂಡಿದ್ದಾರೆ. ಇವರ ಗಲಾಟೆಯಿಂದ ಸಾರ್ವಜನಿಕ ವಸ್ತುಗಳಿಗೆ ಹಾನಿಯಾಗಿದೆ. ಜತೆಗೆ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರತಿದಿನ ಈ ಮಂಗಳಮುಖಿಯರ ಜಗಳ ನಡೆಯುತ್ತಿರುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದೀಗ ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ಕೂಡ ನೀಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 29, 2025 09:46 AM
Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More