Video: ಹಣ ಹಂಚಿಕೆ ವಿಚಾರವಾಗಿ ಮಂಗಳಮುಖಿಯರ ನಡುವೆ ಮಾರಾಮಾರಿ

Updated on: Nov 29, 2025 | 10:13 AM

ಮಂಡ್ಯದ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದಲ್ಲಿ ಹಣ ಹಂಚಿಕೆ ವಿಚಾರಕ್ಕೆ ಮಂಗಳಮುಖಿಯರ ಎರಡು ಗುಂಪುಗಳ ನಡುವೆ ನಡೆದ ಭೀಕರ ಗಲಾಟೆ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕ ಸ್ಥಳದಲ್ಲಿ ನಡೆದ ಈ ಮಾರಾಮಾರಿಯಿಂದ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ ಹಾಗೂ ವಸ್ತುಗಳಿಗೆ ಹಾನಿಯನ್ನುಂಟು ಮಾಡಿದ್ದಾರೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

ಮಂಡ್ಯ, ನ.29: ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡ ಗ್ರಾಮದಲ್ಲಿ ಮಂಗಳಮುಖಿಯರ (Mandya transgender fight) ನಡುವೆ ಬಿಗ್​​​ ಫೈಟ್​​​​​​ ನಡೆದಿದೆ. ಇದೀಗ ಈ ಬಗ್ಗೆ ವಿಡಿಯೋವೊಂದು ವೈರಲ್​​ ಆಗಿದೆ. ಹಣ ಹಂಚಿಕೆ ವಿಚಾರಕ್ಕೆ ಮೈಸೂರು ಮತ್ತು ಮಂಡ್ಯದ ಮಂಗಳಮುಖಿಯರ ಗುಂಪುಗಳ ಮಧ್ಯೆ ಗಲಾಟೆ​ ನಡೆದಿದೆ. ಎರಡು ಕಡೆಯವರು ಸಾರ್ವಜನಿಕ ಸ್ಥಳದಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಂದ ಮನಬಂದಂತೆ ಬಡಿದಾಡಿಕೊಂಡಿದ್ದಾರೆ. ಇವರ ಗಲಾಟೆಯಿಂದ ಸಾರ್ವಜನಿಕ ವಸ್ತುಗಳಿಗೆ ಹಾನಿಯಾಗಿದೆ. ಜತೆಗೆ ಅಲ್ಲಿನ ಜನರಲ್ಲಿ ಆತಂಕ ಸೃಷ್ಟಿಯಾಗಿದೆ. ಪ್ರತಿದಿನ ಈ ಮಂಗಳಮುಖಿಯರ ಜಗಳ ನಡೆಯುತ್ತಿರುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇದೀಗ ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ದೂರು ಕೂಡ ನೀಡಲಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 29, 2025 09:46 AM
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More