ನಾಗಮಂಗಲ ಗಲಭೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್ ಹುನ್ನಾರ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಗಲಭೆ ಬಿಜೆಪಿ, ಆರ್​ಎಸ್​ಎಸ್​ ಹಾಗೂ ಜೆಡಿಎಸ್ ಹುನ್ನಾರ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಎಂ ಲಕ್ಷ್ಮಣ ಇನ್ನೂ ಏನೇನು ಆರೋಪಗಳನ್ನು ಮಾಡಿದರು? ಇಲ್ಲಿದೆ ವಿಡಿಯೋ.

ನಾಗಮಂಗಲ ಗಲಭೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್ ಹುನ್ನಾರ: ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್ ಗಂಭೀರ ಆರೋಪ
| Updated By: ಗಣಪತಿ ಶರ್ಮ

Updated on: Sep 13, 2024 | 2:13 PM

ಮೈಸೂರು, ಸೆಪ್ಟೆಂಬರ್ 13: ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ಪೂರ್ವನಿಯೋಜಿತ. ಗಲಭೆಗೆ ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್​ನವರು ಹುನ್ನಾರ ಮಾಡಿದ್ದರು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಆರ್​ಎಸ್ಎಸ್, ಬಿಜೆಪಿ, ಜೆಡಿಎಸ್​ ಸಂಚನ್ನು ವಿಫಲಗೊಳಿಸುವಲ್ಲಿ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ನಾಗಮಂಗಲ ಪಟ್ಟಣದಲ್ಲಿ ಗಲಭೆ ಮಾಡಿ ಸ್ವಲ್ಪ ಮಟ್ಟಿಗೆ ಯಶಸ್ವಿಯಾಗಿದ್ದಾರೆ ಎಂದರು.

ಮೊದಲು ಮೈಸೂರಿನಲ್ಲಿ ಕೋಮು ಗಲಭೆ‌ಗೆ ಸಂಚು ಹೂಡಿದ್ದರು. ಅಲ್ಲಿ ಅವರ ಪ್ಲ್ಯಾನ್​ ವಿಫಲವಾಗಿದೆ‌. ನಾಗಮಂಗಲದಲ್ಲಿ ನಡೆದ ಕೃತ್ಯದಲ್ಲಿ ಶಾಮೀಲಾಗಿದ್ದು ಯುವಕರು. 20 ಜನ ಹಿಂದೂಗಳು, 30 ಜನ ಮುಸ್ಲಿಮರು ಭಾಗಿಯಾಗಿದ್ದಾರೆ. ಇದು ಆರ್​ಎಸ್​ಎಸ್, ಬಿಜೆಪಿ, ಜೆಡಿಎಸ್ ಪೂರ್ವ ನಿಯೋಜಿತ ಕೃತ್ಯ. ಈ ಕುರಿತು ಗೃಹ ಸಚಿವರು ದಾಖಲೆ ಬಿಡುಗಡೆ ಮಾಡಲಿದ್ದಾರೆ ಎಂದರು.

ನಾಗಮಂಗಲಕ್ಕೆ ಹೋಗಿ ಪ್ರಚೋದನಕಾರಿ ಹೇಳಿಕೆ ಕೊಟ್ಟಿದ್ದಾರೆ‌. ವಿಜಯೇಂದ್ರ, ಅಶೋಕ್​ ಒಂದು ಸಮುದಾಯವನ್ನು ಬೈದಿದ್ದಾರೆ. ಇವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಎಂ.ಲಕ್ಷ್ಮಣ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ಈ ರಾಶಿಯವರು ಅಪರಿಚಿತ ವ್ಯಕ್ತಿಯಿಂದ ಹೆದರಿ ಸಂಪತ್ತು ಕಳೆದುಕೊಳ್ಳಲಿದ್ದೀರಿ
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ವಿಡಿಯೋ: ದರ್ಶನ್ ಕಾಣಲು ವಿಜಯಲಕ್ಷ್ಮಿ ಜೊತೆ ಬಂದ ಧನ್ವೀರ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಬಿಜೆಪಿ ಶಾಸಕ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್