ನಾಗಮಂಗಲ: ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲು ತೂರಾಟ, ಗಲಭೆ ಇದೀಗ ರಾಜ್ಯ ಮಟ್ಟದಲ್ಲೇ ಚರ್ಚೆಗೆ ಗ್ರಾಸವಾಗಿದೆ. ಮತ್ತೊಂದೆಡೆ, ಗಲಭೆ ಕುರಿತ ಒಂದೊಂದೇ ಮಾಹಿತಿ ಹೊರಬೀಳುತ್ತಿವೆ. ಪ್ರತ್ಯಕ್ಷದರ್ಶಿಗಳು ಘಟನೆಯ ಭಿಕರತೆ ಬಗ್ಗೆ ‘ಟಿವಿ9’ ಜತೆ ಮಾತನಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ನಾಗಮಂಗಲ: ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತದ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪ್ರತ್ಯಕ್ಷದರ್ಶಿ
| Updated By: ಗಣಪತಿ ಶರ್ಮ

Updated on: Sep 12, 2024 | 12:56 PM

ಮಂಡ್ಯ, ಸೆಪ್ಟೆಂಬರ್ 12: ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ರಾಜ್ಯ ರಾಜಕಾರಣದಲ್ಲೂ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಹಗರಗಣಗಳಿಂದ ಗಮನ ಸೆಳೆಯಲು ಸರ್ಕಾರವೇ ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪ ಒಂದೆಡೆ ಕೇಳಿಬಂದಿದ್ದರೆ, ಮತ್ತೊಂದೆಡೆ, ಅಲ್ಪಸಂಖ್ಯಾತರ ಅತಿಯಾದ ಓಲೈಕೆ ನೀತಿಯಿಂದ ಹೀಗಾಗುತ್ತಿದೆ ಎಂದು ಕೇಂದ್ರ ಸಚಿವರುಗಳಿಂದಲೇ ಟೀಕೆ ವ್ಯಕ್ತವಾಗಿದೆ. ಆದರೆ, ಪ್ರತಿಪಕ್ಷಗಳ ಆರೋಪಗಳನ್ನು ಅಲ್ಲಗಳೆದಿರುವ ಗೃಹ ಸಚಿವರು, ನಾಗಮಂಗಲದಲ್ಲಿ ಕೋಮು ಗಲಭೆ ನಡೆದಿಲ್ಲ. ಅಲ್ಲಿ ಸಂಭವಿಸಿದ್ದು ಆಕಸ್ಮಿಕ ಘಟನೆ ಎಂದಿದ್ದಾರೆ.

ಮತ್ತೊಂದೆಡೆ, ಬಿಜೆಪಿ ನಿಯೋಗ ಇಂದು ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ. ಈ ಮಧ್ಯೆ, ಬುಧವಾರ ಸಂಜೆ ನಾಗಮಂಗಲದಲ್ಲಿ ಏನೇನಾಯ್ತು ಎಂಬುದನ್ನು ಪ್ರತ್ಯಕ್ಷದರ್ಶಿಗಳು ‘ಟಿವಿ9’ ಜತೆ ವಿವರಿಸಿದ್ದಾರೆ.

ಇದನ್ನೂ ಓದಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದೇನು? ಇಲ್ಲಿದೆ ಸಮಗ್ರ ಮಾಹಿತಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಬಾಂಗ್ಲಾ ನಾಯಕನಿಗೆ ಮಾತಿನಲ್ಲೇ ತಿವಿದ ರೋಹಿತ್ ಶರ್ಮಾ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ಚಹಾ ಕುಡಿಯುತ್ತಾ ಒಡಿಶಾದ ಮಹಿಳೆಯರ ಜೊತೆ ಪ್ರಧಾನಿ ಮೋದಿ ಸಂವಾದ
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ದರ್ಶನ್ ಪ್ರಕರಣ: ಉಪೇಂದ್ರ ಮೊದಲ ಪ್ರತಿಕ್ರಿಯೆ ಹೀಗಿತ್ತು
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಕಗ್ಗತ್ತಲ ರಾತ್ರಿ, ನಡು ರಸ್ತೆಯಲ್ಲಿ ಹುಲಿರಾಯನ ಓಡಾಟ; ವಿಡಿಯೋ ಸೆರೆ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ಬಿಜೆಪಿ ಕಾರ್ಯಾಲಯದಲ್ಲಿ ರಂಗೋಲಿಯಲ್ಲಿ ಅರಳಿದ ಪ್ರಧಾನಿ ಮೋದಿ ಭಾವಚಿತ್ರ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ರಿಲಯನ್ಸ್ ಜಿಯೋ 4G ಫೀಚರ್ ಫೋನ್​ ದೇಶದ ಮಾರುಕಟ್ಟೆಗೆ ಬಿಡುಗಡೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ