ಮಂಡ್ಯ, ಸೆಪ್ಟೆಂಬರ್ 12: ಗಣೇಶೋತ್ಸವ ಮೆರವಣಿಗೆ ಸಂದರ್ಭದಲ್ಲಿ ಮಂಡ್ಯದ ನಾಗಮಂಗಲದಲ್ಲಿ ನಡೆದ ಗಲಭೆ ರಾಜ್ಯ ರಾಜಕಾರಣದಲ್ಲೂ ಬಹಳಷ್ಟು ಚರ್ಚೆಗೆ ಗ್ರಾಸವಾಗಿದೆ. ಹಗರಗಣಗಳಿಂದ ಗಮನ ಸೆಳೆಯಲು ಸರ್ಕಾರವೇ ಇಂಥ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪ ಒಂದೆಡೆ ಕೇಳಿಬಂದಿದ್ದರೆ, ಮತ್ತೊಂದೆಡೆ, ಅಲ್ಪಸಂಖ್ಯಾತರ ಅತಿಯಾದ ಓಲೈಕೆ ನೀತಿಯಿಂದ ಹೀಗಾಗುತ್ತಿದೆ ಎಂದು ಕೇಂದ್ರ ಸಚಿವರುಗಳಿಂದಲೇ ಟೀಕೆ ವ್ಯಕ್ತವಾಗಿದೆ. ಆದರೆ, ಪ್ರತಿಪಕ್ಷಗಳ ಆರೋಪಗಳನ್ನು ಅಲ್ಲಗಳೆದಿರುವ ಗೃಹ ಸಚಿವರು, ನಾಗಮಂಗಲದಲ್ಲಿ ಕೋಮು ಗಲಭೆ ನಡೆದಿಲ್ಲ. ಅಲ್ಲಿ ಸಂಭವಿಸಿದ್ದು ಆಕಸ್ಮಿಕ ಘಟನೆ ಎಂದಿದ್ದಾರೆ.
ಮತ್ತೊಂದೆಡೆ, ಬಿಜೆಪಿ ನಿಯೋಗ ಇಂದು ಸಂಜೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ. ಈ ಮಧ್ಯೆ, ಬುಧವಾರ ಸಂಜೆ ನಾಗಮಂಗಲದಲ್ಲಿ ಏನೇನಾಯ್ತು ಎಂಬುದನ್ನು ಪ್ರತ್ಯಕ್ಷದರ್ಶಿಗಳು ‘ಟಿವಿ9’ ಜತೆ ವಿವರಿಸಿದ್ದಾರೆ.
ಇದನ್ನೂ ಓದಿ: ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದಿದ್ದೇನು? ಇಲ್ಲಿದೆ ಸಮಗ್ರ ಮಾಹಿತಿ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ