ಮಂಡ್ಯ: ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಜೆಸಿಬಿ ನುಗ್ಗಿಸಿದ ಚಾಲಕ, ಆಮೇಲೇನಾಯ್ತು? ವಿಡಿಯೋ ನೋಡಿ
ಚಾಲಕ ಕುಡಿದ ಅಮಲಿನಲ್ಲಿ ಮನಸೋಇಚ್ಛೆ ಜೆಸಿಬಿ ಚಲಾಯಿಸಿದ್ದಾನೆ. ವ್ಯಾಪಾರಿಗಳು, ಸಾರ್ವಜನಿಕರು ಜೆಸಿಬಿ ನಿಲ್ಲಿಸುವಂತೆ ಕಲ್ಲು ತೂರಿದರು. ಬಳಿಕ ಜೆಸಿಬಿ ಬೆನ್ನತ್ತಿ ಹಿಡಿದು ಚಾಲಕನಿಗೆ ಥಳಿಸಿದರು. ಪರಿಣಾಮವಾಗಿ ಬಿಹಾರ ಮೂಲದ ಜೆಸಿಬಿ ಚಾಲಕ ರಾಜ್ಕುಮಾರ್ ಸ್ಥಿತಿ ಗಂಭೀರವಾಗಿದೆ.
ಮಂಡ್ಯ, ನವೆಂಬರ್ 13: ಜೆಸಿಬಿ ಚಾಲಕನೊಬ್ಬ ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಜೆಸಿಬಿ (JCB) ನುಗ್ಗಿಸಿದ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ರಸ್ತೆ ಬದಿ ಅಂಗಡಿಗಳು, ತರಕಾರಿ ಅಂಗಡಿಗಳ ಮೇಲೆ ಜೆಸಿಬಿ ಚಲಿಸಿದೆ. ಜೆಸಿಬಿ ಡಿಕ್ಕಿ ರಭಸಕ್ಕೆ ಟೀ ಹೋಟೆಲ್, ತಳ್ಳುವ ಗಾಡಿಗಳು ಛಿದ್ರ ಛಿದ್ರವಾಗಿವೆ. ಅದೃಷ್ಟವಶಾತ್, ಜೆಸಿಬಿ ನುಗ್ಗಿ ಬರುವುದನ್ನು ಗಮನಿಸಿ ಓಡಿದ್ದರಿಂದ ಜನರು ಸುರಕ್ಷಿತರಾಗಿದ್ದಾರೆ.
ಚಾಲಕ ಕುಡಿದ ಅಮಲಿನಲ್ಲಿ ಮನಸೋಇಚ್ಛೆ ಜೆಸಿಬಿ ಚಲಾಯಿಸಿದ್ದಾನೆ. ವ್ಯಾಪಾರಿಗಳು, ಸಾರ್ವಜನಿಕರು ಜೆಸಿಬಿ ನಿಲ್ಲಿಸುವಂತೆ ಕಲ್ಲು ತೂರಿದರು. ಬಳಿಕ ಜೆಸಿಬಿ ಬೆನ್ನತ್ತಿ ಹಿಡಿದು ಚಾಲಕನಿಗೆ ಥಳಿಸಿದರು. ಪರಿಣಾಮವಾಗಿ ಬಿಹಾರ ಮೂಲದ ಜೆಸಿಬಿ ಚಾಲಕ ರಾಜ್ಕುಮಾರ್ ಸ್ಥಿತಿ ಗಂಭೀರವಾಗಿದೆ.
ಸ್ಥಳಕ್ಕೆ ಆಗಮಿಸಿ ಜೆಸಿಬಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ಬೆಳ್ಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾಜ್ಕುಮಾರ್, ಕುಣಿಗಲ್ ಮೂಲದವರಿಗೆ ಸೇರಿದ ಜೆಸಿಬಿ ಚಾಲಕನಾಗಿದ್ದಾನೆ. ಮಂಡ್ಯ ಜಿಲ್ಲೆ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
