ಮಂಡ್ಯ: ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಜೆಸಿಬಿ ನುಗ್ಗಿಸಿದ ಚಾಲಕ, ಆಮೇಲೇನಾಯ್ತು? ವಿಡಿಯೋ ನೋಡಿ

ಚಾಲಕ ಕುಡಿದ ಅಮಲಿನಲ್ಲಿ ಮನಸೋಇಚ್ಛೆ ಜೆಸಿಬಿ ಚಲಾಯಿಸಿದ್ದಾನೆ. ವ್ಯಾಪಾರಿಗಳು, ಸಾರ್ವಜನಿಕರು ಜೆಸಿಬಿ ನಿಲ್ಲಿಸುವಂತೆ ಕಲ್ಲು ತೂರಿದರು. ಬಳಿಕ ಜೆಸಿಬಿ ಬೆನ್ನತ್ತಿ ಹಿಡಿದು ಚಾಲಕನಿಗೆ ಥಳಿಸಿದರು. ಪರಿಣಾಮವಾಗಿ ಬಿಹಾರ ಮೂಲದ ಜೆಸಿಬಿ ಚಾಲಕ ರಾಜ್​ಕುಮಾರ್ ಸ್ಥಿತಿ ಗಂಭೀರವಾಗಿದೆ.

ಮಂಡ್ಯ: ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಜೆಸಿಬಿ ನುಗ್ಗಿಸಿದ ಚಾಲಕ, ಆಮೇಲೇನಾಯ್ತು? ವಿಡಿಯೋ ನೋಡಿ
| Edited By: ಗಣಪತಿ ಶರ್ಮ

Updated on: Nov 13, 2023 | 8:48 PM

ಮಂಡ್ಯ, ನವೆಂಬರ್ 13: ಜೆಸಿಬಿ ಚಾಲಕನೊಬ್ಬ ಪಾನಮತ್ತನಾಗಿ ಸಂತೆ ನಡೆಯುತ್ತಿದ್ದ ಸ್ಥಳಕ್ಕೆ ಜೆಸಿಬಿ (JCB) ನುಗ್ಗಿಸಿದ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದಲ್ಲಿ ಸೋಮವಾರ ನಡೆದಿದೆ. ರಸ್ತೆ ಬದಿ ಅಂಗಡಿಗಳು, ತರಕಾರಿ ಅಂಗಡಿಗಳ ಮೇಲೆ ಜೆಸಿಬಿ ಚಲಿಸಿದೆ. ಜೆಸಿಬಿ ಡಿಕ್ಕಿ ರಭಸಕ್ಕೆ ಟೀ ಹೋಟೆಲ್, ತಳ್ಳುವ ಗಾಡಿಗಳು ಛಿದ್ರ ಛಿದ್ರವಾಗಿವೆ. ಅದೃಷ್ಟವಶಾತ್, ಜೆಸಿಬಿ ನುಗ್ಗಿ ಬರುವುದನ್ನು ಗಮನಿಸಿ ಓಡಿದ್ದರಿಂದ ಜನರು ಸುರಕ್ಷಿತರಾಗಿದ್ದಾರೆ.

ಚಾಲಕ ಕುಡಿದ ಅಮಲಿನಲ್ಲಿ ಮನಸೋಇಚ್ಛೆ ಜೆಸಿಬಿ ಚಲಾಯಿಸಿದ್ದಾನೆ. ವ್ಯಾಪಾರಿಗಳು, ಸಾರ್ವಜನಿಕರು ಜೆಸಿಬಿ ನಿಲ್ಲಿಸುವಂತೆ ಕಲ್ಲು ತೂರಿದರು. ಬಳಿಕ ಜೆಸಿಬಿ ಬೆನ್ನತ್ತಿ ಹಿಡಿದು ಚಾಲಕನಿಗೆ ಥಳಿಸಿದರು. ಪರಿಣಾಮವಾಗಿ ಬಿಹಾರ ಮೂಲದ ಜೆಸಿಬಿ ಚಾಲಕ ರಾಜ್​ಕುಮಾರ್ ಸ್ಥಿತಿ ಗಂಭೀರವಾಗಿದೆ.

ಸ್ಥಳಕ್ಕೆ ಆಗಮಿಸಿ ಜೆಸಿಬಿ ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು ಆತನನ್ನು ಬೆಳ್ಳೂರಿನ ಬಿಜಿಎಸ್​​ ಆಸ್ಪತ್ರೆಗೆ ದಾಖಲಿಸಿದ್ದಾರೆ. ರಾಜ್​ಕುಮಾರ್, ಕುಣಿಗಲ್ ಮೂಲದವರಿಗೆ ಸೇರಿದ ಜೆಸಿಬಿ ಚಾಲಕನಾಗಿದ್ದಾನೆ. ಮಂಡ್ಯ ಜಿಲ್ಲೆ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಅಶೋಕ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲ್ಲ: ವಿಶ್ವನಾಥ್, ಬಿಜೆಪಿ ಶಾಸಕ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ವಿನೋದ್ ತಾಯಿಯನ್ನು ನೋಡಿಕೊಂಡ ರೀತಿ ಪ್ರತಿಯೊಬ್ಬರಿಗೂ ಮಾದರಿ: ಶಿವಕುಮಾರ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ತಾಯಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಪಾದಮುಟ್ಟಿ ನಮಸ್ಕರಿಸಿದ ವಿನೋದ್ ರಾಜ್
ತಾಯಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಪಾದಮುಟ್ಟಿ ನಮಸ್ಕರಿಸಿದ ವಿನೋದ್ ರಾಜ್
ಲೀಲಮ್ಮ ಮೂಲತಃ ಕ್ರಿಶ್ಚಿಯನ್, ಅವರ ಹೆಸರು ಲೀನಾ ಸಿಕ್ವೇರಾ ಆಗಿತ್ತು!
ಲೀಲಮ್ಮ ಮೂಲತಃ ಕ್ರಿಶ್ಚಿಯನ್, ಅವರ ಹೆಸರು ಲೀನಾ ಸಿಕ್ವೇರಾ ಆಗಿತ್ತು!