ಫ್ರೀ ಅಂತ ಹೇಳಿ ಗೆದ್ದು ಈಗ ನಾಟಕ ಮಾಡ್ಕೊಂಡು ಕೂತವ್ನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯದ ವೃದ್ಧೆ ಕೆಂಡಾಮಂಡಲ

ಚುನಾವಣೆ ಪೂರ್ವದಲ್ಲಿ ಎಲ್ಲರಿಗೂ ಉಚಿತ ಅಂತ ಹೇಳಿ ವೋಟ್ ಪಡೆದು ಗೆದ್ದ ನಂತರ ಈಗ ನಾಟಕ ಮಾಡಿಕೊಂಡು ಕೂತಿದ್ದಾರೆ ಎಂದು ಮಂಡ್ಯದ ವೃದ್ಧೆಯೊಬ್ಬರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಂಡಾಮಂಡಲರಾಗಿದ್ದಾರೆ.

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ಸ್ಕೀಂಗೆ (Congress Free Scheme) ಮಹಿಳೆಯರು ಛೀಮಾರಿ ಹಾಕುತ್ತಿದ್ದಾರೆ. ವಿದ್ಯುತ್ ಬಿಲ್ ಅಧಿಕ ಬಂದಿರುವ ಹಿನ್ನೆಲೆ ಕೀಲಾರ ಗ್ರಾಮದ ಚೆಸ್ಕಾಂ (CHESCOM) ವಿರುದ್ಧ ಆಕ್ರೋಶ ಹೊರಹಾಕಿದ ಮಂಡ್ಯದಲ್ಲಿ ಬಡ ವೃದ್ಧೆ ನಿರ್ಮಲಾ, 350 ಬಿಲ್ ಬಂದಿದೆ 700 ರೂ. ಕಟ್ಟಿ ಅಂತಾರೆ. ನಾವು ಯಾವ ಬಾಕಿನೂ ಉಳಿಸಿಕೊಂಡಿಲ್ಲ. ಇವಾಗ 700 ರೂಪಾಯಿ ಎಲ್ಲಿಂದ ತರಲಿ? ಸಿದ್ದರಾಮಯ್ಯ ಬರಲಿ, ‌ಹೆಂಗಸರು ಹೊಡಿಯುತ್ತಾರೆ. ಅವನು ನಮ್ಮ ತಲೆ ಮೇಲೆ ಹಾಕಿದ್ದಾನೆ. ಫ್ರೀ ಅಂತ ಹೇಳಿ ವೋಟು ಹಾಕಿಸಿಕೊಂಡು ಗೆದ್ದುಬಿಟ್ಟ. ಈಗ ನಾಟಕ ಮಾಡಿಕೊಂಡು ಕೂತಿದ್ದಾನೆ. ಬರಲಿ ಇಲ್ಲಿಗೆ ಅವನು. ಅಕ್ಕಿ ಕೊಡಲು ಕಿತ್ತಾಡಿಕೊಂಡು ಕೂತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Tue, 4 July 23

Follow Us