ಫ್ರೀ ಅಂತ ಹೇಳಿ ಗೆದ್ದು ಈಗ ನಾಟಕ ಮಾಡ್ಕೊಂಡು ಕೂತವ್ನೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಮಂಡ್ಯದ ವೃದ್ಧೆ ಕೆಂಡಾಮಂಡಲ

ಚುನಾವಣೆ ಪೂರ್ವದಲ್ಲಿ ಎಲ್ಲರಿಗೂ ಉಚಿತ ಅಂತ ಹೇಳಿ ವೋಟ್ ಪಡೆದು ಗೆದ್ದ ನಂತರ ಈಗ ನಾಟಕ ಮಾಡಿಕೊಂಡು ಕೂತಿದ್ದಾರೆ ಎಂದು ಮಂಡ್ಯದ ವೃದ್ಧೆಯೊಬ್ಬರು ಸಿಎಂ ಸಿದ್ದರಾಮಯ್ಯ ವಿರುದ್ಧ ಕಂಡಾಮಂಡಲರಾಗಿದ್ದಾರೆ.

ಮಂಡ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ಉಚಿತ ಸ್ಕೀಂಗೆ (Congress Free Scheme) ಮಹಿಳೆಯರು ಛೀಮಾರಿ ಹಾಕುತ್ತಿದ್ದಾರೆ. ವಿದ್ಯುತ್ ಬಿಲ್ ಅಧಿಕ ಬಂದಿರುವ ಹಿನ್ನೆಲೆ ಕೀಲಾರ ಗ್ರಾಮದ ಚೆಸ್ಕಾಂ (CHESCOM) ವಿರುದ್ಧ ಆಕ್ರೋಶ ಹೊರಹಾಕಿದ ಮಂಡ್ಯದಲ್ಲಿ ಬಡ ವೃದ್ಧೆ ನಿರ್ಮಲಾ, 350 ಬಿಲ್ ಬಂದಿದೆ 700 ರೂ. ಕಟ್ಟಿ ಅಂತಾರೆ. ನಾವು ಯಾವ ಬಾಕಿನೂ ಉಳಿಸಿಕೊಂಡಿಲ್ಲ. ಇವಾಗ 700 ರೂಪಾಯಿ ಎಲ್ಲಿಂದ ತರಲಿ? ಸಿದ್ದರಾಮಯ್ಯ ಬರಲಿ, ‌ಹೆಂಗಸರು ಹೊಡಿಯುತ್ತಾರೆ. ಅವನು ನಮ್ಮ ತಲೆ ಮೇಲೆ ಹಾಕಿದ್ದಾನೆ. ಫ್ರೀ ಅಂತ ಹೇಳಿ ವೋಟು ಹಾಕಿಸಿಕೊಂಡು ಗೆದ್ದುಬಿಟ್ಟ. ಈಗ ನಾಟಕ ಮಾಡಿಕೊಂಡು ಕೂತಿದ್ದಾನೆ. ಬರಲಿ ಇಲ್ಲಿಗೆ ಅವನು. ಅಕ್ಕಿ ಕೊಡಲು ಕಿತ್ತಾಡಿಕೊಂಡು ಕೂತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದು, ಇದರ ವಿಡಿಯೋ ವೈರಲ್ ಆಗುತ್ತಿದೆ.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Published On - 4:22 pm, Tue, 4 July 23

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us