Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕುಡಿದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಮಾರಾಮಾರಿ, ಓರ್ವ ಗಂಭೀರ

ಮಂಗಳೂರು: ಕುಡಿದ ಅಮಲಿನಲ್ಲಿ ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಮಾರಾಮಾರಿ, ಓರ್ವ ಗಂಭೀರ

ಅಶೋಕ್​ ಪೂಜಾರಿ, ಮಂಗಳೂರು
| Updated By: ಆಯೇಷಾ ಬಾನು

Updated on: Nov 18, 2023 | 12:26 PM

ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು ಬಾರ್​ನ‌ ಕೌಂಟರ್ ಬಳಿಯೇ ರಕ್ತ ಚಿಮ್ಮುವಂತೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಶೋಕ್ ಪೂಜಾರಿ ಎಂಬಾತನ ಮೇಲೆ ಬಿಯರ್ ಮತ್ತು ಸೋಡಾ ಬಾಟಲಿಯಿಂದ ಹಲ್ಲೆ ನಡೆದಿದೆ. ಅಶೋಕ್ ಪೂಜಾರಿಯ ಪರಿಚಯಸ್ಥರಾದ ರೀತು ಮತ್ತು ವಿಶ್ವ ಎಂಬುವವರೇ ಹಲ್ಲೆ ನಡೆಸಿದ್ದಾರೆ.

ಮಂಗಳೂರು, ನ.18: ಕುಡಿತದ ಮತ್ತಿನಲ್ಲಿ ಬಾರ್‌ನಲ್ಲಿ ಯುವಕರ ಮಧ್ಯೆ ಮಾರಾಮಾರಿಯಾಗಿದೆ. ಮಂಗಳೂರಿನ ಕೊಟ್ಟಾರ ಬಳಿಯ ಕೋಸ್ಟಲ್ ಬಾರ್ ನಲ್ಲಿ ಬಿಯರ್ ಬಾಟಲಿ ಹಾಗೂ ಸೋಡಾ ಬಾಟಲಿಗಳಿಂದ ಯುವಕರು ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಕೆಲ ಯುವಕರಿಗೆ ಗಂಭೀರ ಗಾಯಗಳಾಗಿದ್ದು ಹಲ್ಲೆಯ ದೃಶ್ಯಗಳು ಬಾರ್​ನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷುಲ್ಲಕ ವಿಚಾರಕ್ಕೆ ಯುವಕರ ನಡುವೆ ಗಲಾಟೆ ನಡೆದಿದ್ದು ಬಾರ್​ನ‌ ಕೌಂಟರ್ ಬಳಿಯೇ ರಕ್ತ ಚಿಮ್ಮುವಂತೆ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಅಶೋಕ್ ಪೂಜಾರಿ ಎಂಬಾತನ ಮೇಲೆ ಬಿಯರ್ ಮತ್ತು ಸೋಡಾ ಬಾಟಲಿಯಿಂದ ಹಲ್ಲೆ ನಡೆದಿದೆ. ಅಶೋಕ್ ಪೂಜಾರಿಯ ಪರಿಚಯಸ್ಥರಾದ ರೀತು ಮತ್ತು ವಿಶ್ವ ಎಂಬುವವರೇ ಹಲ್ಲೆ ನಡೆಸಿದ್ದಾರೆ. ಅನೂಪ್ ಮತ್ತು ರೀತು ಮಧ್ಯೆ ಮಾತಿನ ಚಕಮಕಿ ನಡೆದಾಗ ಅಶೋಕ್ ಮಧ್ಯ ಪ್ರವೇಶಿಸಿದ್ದ. ಈ ವೇಳೆ ರೀತು ಕೌಂಟರ್​ನಲ್ಲಿದ್ದ ಬಿಯರ್ ಬಾಟಲಿ ತೆಗೆದು ಅಶೋಕ್ ತಲೆಗೆ ಹೊಡೆದಿದ್ದಾನೆ. ಇದೇ ವೇಳೆ ಕೊಟ್ಟಾರ ಚೌಕಿಯ ವಿಶ್ವ ಎಂಬುವವನೂ ಸೋಡಾ ಬಾಟಲಿಯಿಂದ ಹಲ್ಲೆ ನಡೆಸಿದ್ದಾನೆ. ಅಷ್ಟೇ ಅಲ್ಲದೆ ಬಿಯರ್ ಬಾಟಲಿ ಮತ್ತು ಸೋಡಾ ಬಾಟಲಿ ಚೂರಿನಿಂದ ತಲೆ, ಮುಖದ ಭಾಗಗಳಿಗೆ ತಿವಿದು ಕೊಲೆಗೆ ಯತ್ನಿಸಲಾಗಿದೆ. ತಲೆಗೆ, ಬೆನ್ನಿಗೆ ಮತ್ತು ಮುಖಕ್ಕೆ ಬಲವಾಗಿ ಹೊಡೆದು ರಕ್ತ ಚಿಮ್ಮುವಂತೆ ಹಲ್ಲೆ ಮಾಡಿದ್ದಾರೆ. ತಲೆ, ಮುಖ, ಬೆನ್ನಿನ ಭಾಗಗಳಲ್ಲಿ ರಕ್ತ ಬರುತ್ತಿದ್ದು ಮೂಗಿನ ಮೂಳೆ ಮುರಿದಿದೆ. ತೀವ್ರ ರಕ್ತಸ್ರಾವ ಹಿನ್ನೆಲೆ ಆಶೋಕ್​ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ