ಮಂಗಳೂರು: ಜಲೀಲ್ ಹತ್ಯೆ ಪ್ರಕರಣ: ಸುರತ್ಕಲ್​ನಲ್ಲಿ 144 ಸೆಕ್ಷನ್​ ಜಾರಿ

| Updated By: ಗಂಗಾಧರ​ ಬ. ಸಾಬೋಜಿ

Updated on: Dec 25, 2022 | 9:22 PM

ಚಾಕು ಇರಿದು ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣದ ನಂತರ ಮಂಗಳೂರು ನಗರ ಹೊರವಲಯದ ಸುರತ್ಕಲ್​ ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ ನಿರ್ಮಾಣವಾಗಿದ್ದು, 144 ಸೆಕ್ಷನ್ ಹಾಕಲಾಗಿದೆ.

ಮಂಗಳೂರು: ಕಾಟಿಪಳ್ಳದಲ್ಲಿ ಚಾಕು ಇರಿದು ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣ (Abdul Jaleel Murder Case)ದ ನಂತರ ಮಂಗಳೂರು ನಗರ ಹೊರವಲಯದ ಸುರತ್ಕಲ್ (Surathkal) ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ ನಿರ್ಮಾಣವಾಗಿದ್ದು, ಸದ್ಯ 144 ಸೆಕ್ಷನ್ ಹಾಕಲಾಗಿದೆ. ಮಂಗಳೂರಿನ ಸುರತ್ಕಲ್​​ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಸುರತ್ಕಲ್​​, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರ ಬೆಳಗ್ಗೆ 6ರವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್​. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:21 pm, Sun, 25 December 22

Follow us on