ಮಂಗಳೂರಿನಲ್ಲಿ ನಿಗೂಢವಾಗಿ ಸಾವನ್ನಪ್ಪುತ್ತಿವೆ ಜಾನುವಾರುಗಳು: ಒಂದೇ ಮನೆಯ 7 ದನ, ಕರುಗಳ ಸಾವು

Edited By:

Updated on: Jun 23, 2025 | 8:54 AM

ಮಂಗಳೂರಿನ ಕೆಲರಾಯಿಯಲ್ಲಿ ಒಂದೇ ಕುಟುಂಬದ ಏಳು ದನ, ಕರುಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ಕಳೆದ 50 ವರ್ಷಗಳಿಂದ ಹೈನುಗಾರಿಕೆ ಮಾಡುತ್ತಿರುವ ಪ್ರಕಾಶ್ ಕುಟುಂಬಕ್ಕೆ ಈ ಘಟನೆ ಆಘಾತ ತಂದಿದೆ. ದನಗಳಿಗೆ ವಿಷಪ್ರಾಶನ ನೀಡಲಾಗಿದೆ ಎಂದು ಅನುಮಾನಿಸಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪಶುಪಾಲನೆ ಇಲಾಖೆಯ ಅಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ್ದಾರೆ.

ಮಂಗಳೂರು, ಜೂನ್​ 23: ನಗರ ಹೊರವಲಯದ ನೀರು ಮಾರ್ಗ ಸಮೀಪದ ಕೆಲರಾಯಿ ಎಂಬಲ್ಲಿ ಒಂದೇ ಮನೆಯ 7 ದನ, ಕರುಗಳು ನರಳಿ ನರಳಿ‌ ನಿಗೂಢವಾಗಿ ಸಾವನ್ನಪ್ಪುತ್ತಿರುವಂತಹ (death) ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಕಳೆದ 50 ವರ್ಷಗಳಿಂದ ಹೈನುಗಾರಿಕೆ ನಡೆಸಿಕೊಂಡು ಬರುತ್ತಿರುವ ಪ್ರಕಾಶ್ ಕುಟುಂಬದ ದನ, ಕರುಗಳು ಸಾವನ್ನಪ್ಪಿವೆ. ವಿಷಪ್ರಾಶನ ಮಾಡಿರುವ ಅನುಮಾನ ವ್ಯಕ್ತವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More