ಮಂಗಳೂರು ಭಜರಂಗದಳ, ವಿಹೆಚ್​​ಪಿಯಿಂದ ಬಿಸಿ ರೋಡ್ ಚಲೋ ಕರೆ, ಪೊಲೀಸ್​​ ಬಿಗಿ ಬಂದೋಬಸ್ತ್

|

Updated on: Sep 16, 2024 | 9:46 AM

ಈದ್​​ ಮಿಲಾದ್​ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​ನಲ್ಲಿ ಮೆರವಣಿಗೆ ನಡೆಯಲಿವೆ. ಆದರೆ, ಕೆಲ ಮುಸ್ಲಿಂ ಮುಖಂಡರು ಪ್ರಚೋದನಕಾರಿ ಹೇಳಿಕೆಯಿಂದ ಆಕ್ರೋಶಗೊಂಡ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್​ ಬಿ‌.ಸಿ.ರೋಡ್ ಚಲೋ ಕರೆ ನೀಡಿವೆ.

ಮಂಗಳೂರಿನಲ್ಲಿ ವಾತಾವರಣ ಪ್ರಕ್ಷುಬ್ಧಗೊಂಡಿದೆ. ಈದ್​​ ಮಿಲಾದ್​ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್​ನಲ್ಲಿ ಇಂದು (ಸೆ.16) ಮೆರವಣಿಗೆ ನಡೆಯಲಿವೆ. ಆದರೆ ರವಿವಾರ ಸಂಜೆ ಕೆಲ ಮುಸ್ಲಿಂ ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮುಖಂಡರು​ ಬಿ‌.ಸಿ.ರೋಡ್ ಚಲೋ ಕರೆ ನೀಡಿದ್ದಾರೆ. ಹೀಗಾಗಿ ನಗರದಲ್ಲಿ ವಾತಾವರಣ ಬೂದಿ ಮುಚ್ಚಿದ ಕೆಂಡದಂತಿದೆ. ಪೊಲೀಸರು ಬಿ.ಸಿ.ರೋಡ್​ನಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ. ನಿಗದಿಕ್ಕಿಂತ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಎಸ್​​ಪಿ ಯತೀಶ್ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ: ಸುರತ್ಕಲ್​​ ಬಳಿಯ ಕಾಟಿಪಳ್ಳದಲ್ಲಿ ಮಸೀದಿ ಮೇಲೆ ಕಲ್ಲು ತೂರಾಟ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:41 am, Mon, 16 September 24

Follow us on