ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಕಿತ್ತುಕೊಂಡು ಹೋದ್ರು..!

ಕರ್ನಾಟಕದಲ್ಲಿ ಒಂದರ ಮೇಲೋಂದರಂತೆ ಬ್ಯಾಂಕ್ ದರೋಡೆ ಕೇಸ್​ಗಳು ನಡೆಯುತ್ತಿವೆ. ಗುರುವಾರ ಅಷ್ಟೇ ಬೀದರ್​​ನಲ್ಲಿ ಎಂಟಿಎಂಗೆ ಹಣ ತುಂಬಿಸೋ ಸಂದರ್ಭದಲ್ಲಿ ಸಿಬ್ಬಂದಿಗೆ ಗುಂಡು ಹಾರಿಸಿ ದರೋಡೆ ಮಾಡಲಾಗಿತ್ತು. ಈ ಬೆನ್ನಲ್ಲೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಅದು ಮಂಗಳೂರಲ್ಲಿ ಎಂಬುದು ಅಚ್ಚರಿ. ಇನ್ನು ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದ ಟೆಕ್ನಿಷಿಯನ್​​ ವಜ್ರದ ಉಂಗುರವನ್ನೇ ಕಿತ್ತುಕೊಂಡು ಹೋಗಿದ್ದಾರೆ.

ಮಂಗಳೂರು, (ಜನವರಿ 17): ಥೇಟ್​​ ಸಿನಿಮಾ ಶೈಲಿಯಲ್ಲೇ ಮಂಗಳೂರು ಬ್ಯಾಂಕ್​ನಲ್ಲಿ ದರೋಡೆ ನಡೆದಿದೆ. ಮಂಗಳೂರಿನ ಉಲ್ಲಾಳದ ಕೆಸಿ ರಸ್ತೆಯಲ್ಲಿರೋ ಕೋಟೆಕಾರು ಬ್ಯಾಂಕ್​​ಗೆ ನುಗ್ಗಿ ಹಾಡಹಗಲೇ ದರೋಡೆ ಮಾಡಲಾಗಿದೆ. ಬ್ಯಾಂಕ್​ಗೆ ನುಗ್ಗಿದ ಐದು ಜನರ ಖತರ್ನಾಕ್​​ ಕಳ್ಳರ ಗ್ಯಾಂಗ್​​ ಸಿಬ್ಬಂದಿಗೆ ಬೆದರಿಸಿ ಕೋಟಿಗಟ್ಟಲೇ ಹಣದ ಜೊತೆಗೆ ಚಿನ್ನ ಕದ್ದು ಎಸ್ಕೇಪ್​ ಆಗಿದೆ. ಇನ್ನು ಸಿಸಿಟಿವಿ ಕ್ಯಾಮೆರಾ ಕೆಟ್ಟು ಹೋಗಿದ್ದರಿಂದ ಇಂದು ಟೆಕ್ನಿಷಿಯನ್​ ರಿಪೇರಿ ಮಾಡಲು ಬ್ಯಾಂಕ್​ಗೆ ಬಂದಿದ್ದಾನೆ. ಅದೇ ವೇಳೆಯಲ್ಲೇ ದರೋಡೆಕೋರರು ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಕ್ಕಷ್ಟು ಹಣ, ಚಿನ್ನ ದೋಚಿದ್ದಾರೆ. ಅಲ್ಲದೇ ಸಿಸಿಟಿವಿ ರಿಪೇರಿ ಮಾಡುತ್ತಿದ್ದ ಟೆಕ್ನಿಷಿಯನ್ ಕೈಯಲ್ಲಿದ್ದ ವಜ್ರದ ಉಂಗುರವನ್ನು ಸಹ ಕಿತ್ತುಕೊಂಡು ಪರಾರಿಯಾಗಿದ್ದು, ಇದೀಗ ಟೆಕ್ನಿಷಿಯನ್ ಕಂಗಾಲಾಗಿದ್ದಾನೆ

Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us