ಮಂಗಳೂರು ಹೊರವಲಯದಲ್ಲಿ ತಮ್ಮ ಮೇಲೆ ಹಲ್ಲೆ ನಡೆಸಿದ ಕೊಲೆ ಅರೋಪಿಗಳನ್ನು ಪೊಲೀಸರು ಗುಂಡು ಹಾರಿಸಿ ವಶಕ್ಕೆ ಪಡೆದರು

Edited By: ಅರುಣ್​ ಕುಮಾರ್​ ಬೆಳ್ಳಿ

Updated on: Jun 11, 2022 | 11:44 AM

ಓಡಿಹೋಗುತ್ತಿದ್ದ ಅವರನ್ನು ಎಚ್ಚರಿಸಲು ಪೊಲೀಸರು ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅವರು ನಿಲ್ಲದೆ ಹೋದಾಗ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು:  ರೌಡಿ ಶೀಟರ್​ಗಳು ಪೊಲೀಸರು (police) ಬಂಧಿಸಲು ಹೋದಾಗ ಅವರ ಮೇಲೆ ಹಲ್ಲೆ ನಡೆಸುವ ಪ್ರಕರಣಗಳು ಹೆಚ್ಚಾಗುತ್ತಿವೆ ಮಾರಾಯ್ರೇ. ಮಂಗಳೂರು ನಗರದ ಹೊರವಲಯದಲ್ಲಿ ಶನಿವಾರ ಬೆಳಗಿನ ಜಾವ, ರೌಡಿಶೀಟರ್ ರಾಜಾ (rowdy sheeter) ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿರುವ ಮನೋಜ್ (Manoj) ಮತ್ತು ಅರ್ಜುನ್ ಮೂಡುಶೆಡ್ಡೆ (Arjun Moodushedde) ಎನ್ನುವವರನ್ನು ಸಿಸಿಬಿ ಪೊಲೀಸರು ಬಂಧಿಸಲು ಹೋದಾಗ ರೌಡಿಗಳು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಓಡಿಹೋಗುತ್ತಿದ್ದ ಅವರನ್ನು ಎಚ್ಚರಿಸಲು ಪೊಲೀಸರು ಮೂರು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಅವರು ನಿಲ್ಲದೆ ಹೋದಾಗ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
Web contact

TV9 Kannada

Read More