ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ ಕೇಸ್​​ನಲ್ಲಿ SDPI ಕೈವಾಡ, ಲವ್​​ ಜಿಹಾದ್​ ಆರೋಪ

Edited By:

Updated on: Feb 12, 2026 | 3:22 PM

ಸುರತ್ಕಲ್‌ನ ಹಿಂದೂ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ, ಯುವತಿಯ ತಂದೆ ವಿಶ್ವನಾಥ್ ಲವ್ ಜಿಹಾದ್ ಆರೋಪ ಮಾಡಿದ್ದಾರೆ. SDPI ಸಂಘಟನೆಯ ಕೈವಾಡವಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮಗಳು ವಾಪಸ್ ಬರಬೇಕೆಂದು ಮನವಿ ಮಾಡಿದ್ದು, ಪೊಲೀಸ್ ತನಿಖೆಗೂ ಒತ್ತಾಯಿಸಿದ್ದಾರೆ. 

ಮಂಗಳೂರು, ಫೆಬ್ರವರಿ 12: ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ SDPI ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಅಟ್ಲಾಂಟಿಕ್ ಜುವೆಲ್ಲರ್ಸ್ ಮಾಲೀಕರು SDPI ಮುಖಂಡರು ಎಂದು ತಿಳಿದುಬಂದಿದೆ. ಮಿದ್ಲಾಜ್ ಪರವಾಗಿ ಹಲವರು ವಯನಾಡು ಪೊಲೀಸ್ ಠಾಣೆಗೆ ಬಂದವರು ಕೂಡ ಅದೇ ಸಂಘಟನೆಗೆ ಸೇರಿದವರು ಎಂದು ದೂರಲಾಗಿದೆ. ಮಗಳು ಯಾವುದೇ ಮಾದಕ ವ್ಯಸನ ಅಥವಾ ಬ್ರೈನ್ ವಾಶ್‌ಗೆ ಒಳಗಾಗಿದ್ದಳೇ ಎಂಬುದು ತಮಗೆ ನಿಖರವಾಗಿ ತಿಳಿದಿಲ್ಲ. ಆದರೆ ಆಕೆ ಸುರಕ್ಷಿತವಾಗಿ ಮನೆಗೆ ಮರಳಬೇಕು. ಈ ಬಗ್ಗೆ ಪೊಲೀಸ್​​ ತನಿಖೆ ಆಗಬೇಕು ಎಂದು ವಿಶ್ವನಾಥ್​ ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 12, 2026 03:19 PM