ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಮೋಹನ್ ದಾಸ್ ಕೆಂಡಾಮಂಡಲ

Updated on: Feb 19, 2026 | 5:02 PM

ಮಂಗಳೂರಿಗೆ ಕೋಮುವಾದ ಕಾರಣಕ್ಕೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಉದ್ಯಮಿ ಮೋಹನ್ ದಾಸ್ ಪೈ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಅನಗತ್ಯ ಹಾಗೂ ನಾಚಿಕೆಗೇಡಿನ ಸಂಗತಿ ಎಂದಿರುವ ಪೈ, ಖರ್ಗೆಯೇ ಇತ್ತೀಚೆಗೆ ಮಂಗಳೂರಿನಲ್ಲಿ ಕಂಡ ಭಾರಿ ಹೂಡಿಕೆ ಹಾಗೂ ಉದ್ಯೋಗ ಸೃಷ್ಟಿಯನ್ನು ನೆನಪಿಸಿದ್ದಾರೆ.

ಬೆಂಗಳೂರು, ಫೆಬ್ರವರಿ 19: ಕೋಮುವಾದ ಕಾರಣಕ್ಕೆ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಇದೀಗ ಈ ವಿಚಾರವಾಗಿ ಉದ್ಯಮಿ ಮೋಹನ್ ದಾಸ್ ಪೈ ಕೂಡ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿರುವ ಮೋಹನ್ ದಾಸ್ ಪೈ, ಇದು ಅತ್ಯಂತ ನಾಚಿಕೇಡಿನ ಹಾಗೂ ಅನಗತ್ಯ ಎಂದು ಹೇಳಿದ್ದಾರೆ. ಇನ್ನು ಇತ್ತೀಚೆಗೆ ಐಟಿ ಸಚಿವರು ಮಂಗಳೂರಿಗೆ ಭೇಟಿ ನೀಡಿದ್ದ ವೇಳೆ ಭಾರೀ ಪ್ರಮಾಣದ ಹೂಡಿಕೆಗಳು ಆಗುತ್ತಿರುವುದು, ಉದ್ಯೋಗಗಳು ಸೃಷ್ಟಿಯಾಗುತ್ತಿರುವುದು ಮತ್ತು ಅನೇಕರು ಮಂಗಳೂರಿನ ಅಭಿವೃದ್ಧಿಗಾಗಿ ಬಹಳ ಕಷ್ಟಪಡುತ್ತಿರುವುದನ್ನು ಅವರು ನೋಡಿದ್ದರು. ಅಂತಹ ಸಂದರ್ಭದಲ್ಲಿ ಅವರು ಈ ರೀತಿಯ ಹೇಳಿಕೆ ನೀಡಿರುವುದು ಅತ್ಯಂತ ನಾಚಿಕೇಡು ಮತ್ತು ಅನಗತ್ಯ ಎಂದು ವಾಗ್ದಾಳಿ ಮಾಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us