ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನ ಬಜಪೆಯ ಕಿನ್ನಿಪದವು ಬಳಿ ಹಿಂದೂ (Hindu) ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಮಂಗಳೂರು ಪೊಲೀಸ್ ಆಯುಕ್ತ ಸ್ಫೋಟಕ ಅಂಶ ಬಿಚ್ಚಿಟ್ಟಿದ್ದಾರೆ.
ಮಂಗಳೂರು, (ಮೇ 01): ಮಂಗಳೂರಿನ ಬಜಪೆಯ ಕಿನ್ನಿಪದವು ಬಳಿ ಹಿಂದೂ (Hindu) ಕಾರ್ಯಕರ್ತನ ಬರ್ಬರ ಹತ್ಯೆ ನಡೆದಿದೆ. ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ.
ಇನ್ನು ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಇನೋವಾ ಕಾರಿನಲ್ಲಿ ಸಹಚರರ ಜೊತೆ ತೆರಳುತ್ತಿದ್ದ ಸುಹಾಸ್ ಕಾರು ಅಡ್ಡಗಟ್ಟಿ ತಲ್ವಾರ್ಗಳಿಂದ ಹಲ್ಲೆ ಮಾಡಿದ್ದಾರೆ. ಗೂಡ್ಸ್ ವಾಹನ, ಕಾರಿನಲ್ಲಿ ಬಂದು ಸುಹಾಸ್ ಹತ್ಯೆಗೈದಿದ್ದಾರೆ. ಸುಹಾಸ್ ಶೆಟ್ಟಿಯನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಶುರು ಮಾಡಲಾಗಿದ್ದು, ಆರೋಪಿಗಳ ಪತ್ತೆಗಾಗಿ ತಂಡ ರಚಿಸುತ್ತೇವೆ. ಇನ್ನು ಪೊಲೀಸ್ ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ. ಮಂಗಳೂರು ನಗರದಲ್ಲಿ ಹೆಚ್ಚಿನ ಬಂದೋಬಸ್ತ್ ಕಲ್ಪಿಸಲಾಗುತ್ತೆ. ಇದು ಪ್ರತೀಕಾರದ ಹತ್ಯೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ ಎಂದು ತಿಳಿಸಿದರು.
Published on: May 01, 2025 11:26 PM
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

