AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಮಂಗಳೂರು ಕಮಿಷನರ್

ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಮಂಗಳೂರು ಕಮಿಷನರ್

ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ರಮೇಶ್ ಬಿ. ಜವಳಗೇರಾ

Updated on: May 01, 2025 | 11:08 PM

ಬಜಪೆಯ ಕಿನ್ನಿಪದವು ಬಳಿ ಮತ್ತೋರ್ವ ಹಿಂದೂ (Hindu) ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ. ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಇಂದು(ಮೇ 01) ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ. ಈ ಸಂಬಂಧ ಮಂಗಳೂರು ಪೊಲೀಸ್​ ಆಯುಕ್ತ ಅನುಪಮ್​ ಅಗರ್ವಾಲ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಹಾಸ್ ಶೆಟ್ಟಿ ಹತ್ಯೆಯ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಮಂಗಳೂರು, (ಮೇ 01): ಬಜಪೆಯ ಕಿನ್ನಿಪದವು ಬಳಿ ಮತ್ತೋರ್ವ ಹಿಂದೂ (Hindu) ಕಾರ್ಯಕರ್ತನ ಬರ್ಬರ ಹತ್ಯೆಯಾಗಿದೆ. ಸುಹಾಸ್ ಶೆಟ್ಟಿ ಕೊಲೆಯಾದ ಕಾರ್ಯಕರ್ತ. ಸುರತ್ಕಲ್‌ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿಯನ್ನು ಇಂದು(ಮೇ 01) ರಾತ್ರಿ ಹೊಂಚು ಹಾಕಿ ನಾಲ್ವರು ತಲವಾರಿನಿಂದ ಹತ್ಯೆ ಮಾಡಿದ್ದಾರೆ. ಈ ಸಂಬಂಧ ಮಂಗಳೂರು ಪೊಲೀಸ್​ ಆಯುಕ್ತ ಅನುಪಮ್​ ಅಗರ್ವಾಲ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಸಹಾಸ್ ಶೆಟ್ಟಿ ಹತ್ಯೆಯ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಸುಹಾಸ್ ಇನೋವಾ ಕಾರಿನಲ್ಲಿ ಸಹಚರರ ಜೊತೆ ತೆರಳುತ್ತಿದ್ದ. ಆ ವೇಳೆ ಗೂಡ್ಸ್​ ವಾಹನ, ಕಾರಿನಲ್ಲಿ ಬಂದು ಸುಹಾಸ್​ ಕಾರು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಸುಹಾಸ್​ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿತ್ತಾದೂರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಸುಹಾಸ್​ ಶೆಟ್ಟಿಯನ್ನೇ ಟಾರ್ಗೆಟ್​ ಮಾಡಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದರು.