ಮಂಗಳೂರು: ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!

Edited By:

Updated on: Jun 15, 2025 | 9:32 AM

ಮಂಗಳೂರಿನ ಕಂಕನಾಡಿಯ ಸುವರ್ಣ ಲೇನ್​​ನಲ್ಲಿ ಭಾರೀ ಮಳೆಗೆ ಖಾಸಗಿ ಆಸ್ಪತ್ರೆಯ ಗೋಡೆ ಕುಸಿದಿದ್ದು, ಕೂದಳೆಲೆ ಅಂತರದಲ್ಲಿ ಜೋಕಿಂ ಡಿಸೋಜಾರ ಕುಟುಂಬ ಪಾರಾಗಿದೆ. ಕಾಂಪೌಂಡ್ ಗೋಡೆ ಕುಸಿತದ ರಣಭೀಕರ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಈ ಘಟನೆ ಎಲ್ಲರಲ್ಲೂ ಭಯ ಹುಟ್ಟಿಸಿದೆ.

ಮಂಗಳೂರು, ಜೂನ್​ 15: ಮಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಅಲ್ಪ ಬಿಡುವು ಕೊಟ್ಟಿದ್ದ ಮಳೆರಾಯ (Rain) ನಿನ್ನೆ ಸಂಜೆ ಮತ್ತೆ ಅಬ್ಬರಿಸಿ ಬೊಬ್ಬರಿದಿದ್ದಾನೆ. ನಗರದ ಯಾವ ರಸ್ತೆಗೆ ಹೋದರೂ ನೀರೇ ನೀರು. ಈ ಮಧ್ಯೆ ಖಾಸಗಿ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿದು ಅವಘಡ ಸಂಭವಿಸಿರುವಂತಹ ಘಟನೆ ಕಂಕನಾಡಿ ಬಳಿಯ ಸುವರ್ಣ ಲೇನ್​ನಲ್ಲಿ ನಡೆದಿದೆ. ಕೂದಳೆಲೆ ಅಂತರದಲ್ಲಿ ಜೋಕಿಂ ಡಿಸೋಜಾ ಕುಟುಂಬದ 6 ಜನರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಂಪೌಂಡ್ ಕುಸಿಯುವ ರಣಭೀಕರ ದೃಶ್ಯ ಮನೆಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಎದೆನಡುಗಿಸುತ್ತಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jun 15, 2025 09:28 AM
Follow Us
Ashok

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸುದ್ದಿಬಿಡುಗಡೆ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಪ್ರಜಾ ಟಿ.ವಿಯ ಉಡುಪಿ ಜಿಲ್ಲಾ ವರದಿಗಾರರಾಗಿ ಒಂದು ವರ್ಷ ಏಳು ತಿಂಗಳು ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ, ಒಂದು ವರ್ಷ ನಾಲ್ಕು ತಿಂಗಳಿನಿಂದ ಟಿ.ವಿ 9 ವಾಹಿನಿಯಲ್ಲಿ ದಕ್ಷಿಣಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ ಇಂಡಿಯಾ ಟೆಲಿವಿಷನ್​ . ಕಾಮ್​ 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More