AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ: ವಿಳಂಬದಿಂದ ಸಾರ್ವಜನಿಕ ಆರೋಗ್ಯಕ್ಕೆ ಅಪಾಯ

ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ: ವಿಳಂಬದಿಂದ ಸಾರ್ವಜನಿಕ ಆರೋಗ್ಯಕ್ಕೆ ಅಪಾಯ

ಭಾವನಾ ಹೆಗಡೆ
|

Updated on: Aug 21, 2026 | 12:35 PM

Share

ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಒಂದೇ ಒಂದು ಆಹಾರ ಗುಣಮಟ್ಟ ಪರೀಕ್ಷಾ ಕೇಂದ್ರವಿಲ್ಲ. ಇದರಿಂದ ಆಹಾರ ಮಾದರಿಗಳನ್ನು ಬೆಂಗಳೂರು ಅಥವಾ ಮೈಸೂರಿಗೆ ಕಳುಹಿಸಬೇಕಾಗುತ್ತದೆ, ವರದಿಗಳು ತಡವಾಗಿ ಬರುವುದರಿಂದ ಆಹಾರ ಸುರಕ್ಷತಾ ಕ್ರಮಗಳು ಪರಿಣಾಮಕಾರಿಯಾಗಿರುವುದಿಲ್ಲ. ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಸ್ಥಳೀಯ ಲ್ಯಾಬ್‌ನ ಅನಿವಾರ್ಯತೆ ಇದೆ.

ಮಂಗಳೂರು, ಆಗಸ್ಟ್ 21: ಇತ್ತೀಚೆಗೆ ರಾಜ್ಯಾದ್ಯಂತ ಹೋಟೆಲ್‌ಗಳು ಮತ್ತು ಆಹಾರ ಮಳಿಗೆಗಳ ಮೇಲೆ ಆರೋಗ್ಯ ಇಲಾಖೆ ದಾಳಿ ನಡೆಸಿ, ಆಹಾರ ಮಾದರಿಗಳನ್ನು ಸಂಗ್ರಹಿಸುತ್ತಿದೆ. ಆದರೆ, ಮಂಗಳೂರು ಮತ್ತು ಉಡುಪಿ ಸೇರಿದಂತೆ ದಕ್ಷಿಣ ಕನ್ನಡದ ಕರಾವಳಿ ಭಾಗದಲ್ಲಿ ಆಹಾರ ಗುಣಮಟ್ಟ ಪರೀಕ್ಷಿಸಲು ಒಂದೇ ಒಂದು ಲ್ಯಾಬ್ ಇಲ್ಲದಿರುವುದು ಗಂಭೀರ ಸಮಸ್ಯೆಯಾಗಿದೆ.

ಈ ಭಾಗದಲ್ಲಿ ಸಂಗ್ರಹಿಸುವ ಆಹಾರ ಮತ್ತು ನೀರಿನ ಮಾದರಿಗಳನ್ನು ಪರೀಕ್ಷೆಗಾಗಿ ಬೆಂಗಳೂರು ಅಥವಾ ಮೈಸೂರಿಗೆ ರವಾನಿಸಬೇಕಾಗುತ್ತದೆ. ಇದರಿಂದ ವರದಿಗಳು ಬರುವುದು ತಡವಾಗಿ, ತುರ್ತು ಸಂದರ್ಭಗಳಲ್ಲಿ ತಕ್ಷಣದ ಕ್ರಮ ಕೈಗೊಳ್ಳಲು ಅಡ್ಡಿಯಾಗುತ್ತಿದೆ. ಉದಾಹರಣೆಗೆ, ಬ್ರೆಡ್‌ನಂತಹ ಬೇಗನೆ ಹಾಳಾಗುವ ಮಾದರಿಗಳನ್ನು ದೂರದ ಲ್ಯಾಬ್‌ಗಳಿಗೆ ಕಳುಹಿಸುವ ಹೊತ್ತಿಗೆ ಅವುಗಳ ಗುಣಮಟ್ಟದಲ್ಲಿ ಬದಲಾವಣೆಗಳಾಗುವ ಸಾಧ್ಯತೆಯಿದೆ.

ಎರಡು ವರ್ಷಗಳ ಹಿಂದೆ ಮಂಗಳೂರಿನ ನರ್ಸಿಂಗ್ ಕಾಲೇಜಿನಲ್ಲಿ ನಡೆದ ಆಹಾರ ವಿಷಬಾಧೆ ಪ್ರಕರಣದಲ್ಲಿ, ಸ್ಥಳೀಯ ಲ್ಯಾಬ್ ಇದ್ದಿದ್ದರೆ ತ್ವರಿತವಾಗಿ ಸತ್ಯಾಂಶ ಹೊರಬರುತ್ತಿತ್ತು. ಸಚಿವ ಯು.ಟಿ. ಖಾದರ್ ಅವರು ಈ ಬಗ್ಗೆ ಗಮನ ಹರಿಸಿ, ಮಂಗಳೂರಿನಲ್ಲಿ ಆಹಾರ ಗುಣಮಟ್ಟ ಪರೀಕ್ಷಾ ಲ್ಯಾಬ್ ಸ್ಥಾಪಿಸುವ ಮೂಲಕ ಸಾರ್ವಜನಿಕ ಆರೋಗ್ಯವನ್ನು ಕಾಪಾಡಲು ಮುಂದಾಗಬೇಕು. ಇದು ಕರಾವಳಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೂ ಪ್ರಯೋಜನಕಾರಿಯಾಗಲಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us