ಫಿನಾಲೆ ಟಿಕೆಟ್ ಪಡೆಯಲು ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ನಡೆಯಿತು ಯುದ್ಧ

Updated on: Jan 07, 2025 | 8:20 AM

ಬಿಗ್ ಬಾಸ್​ನಲ್ಲಿ ಈ ವಾರ ‘ಟಿಕೆಟ್ ಟು ಫಿನಾಲೆ’ ಟಾಸ್ಕ್ ಮಾಡಿದ್ದಾರೆ. ಇದಕ್ಕಾಗಿ ಸ್ಪರ್ಧಿಗಳ ಮಧ್ಯೆ ಯುದ್ಧಗಳೇ ನಡೆಯುವ ಸೂಚನೆ ಸಿಕ್ಕಿದೆ. ಸ್ಪರ್ಧಿಗಳ ಮಧ್ಯೆ ಕಾಂಪಿಟೇಷನ್ ಜೋರಾದಂತೆ ಆಟದ ವೈಖರಿಯೂ ಬದಲಾಗಿದೆ. ಅದರಲ್ಲೂ ತ್ರಿವಿಕ್ರಂ ಹಾಗೂ ಮಂಜು ಮಧ್ಯೆ ಜಗಳ ಮಿತಿ ಮೀರಿದೆ.

ಟಾಸ್ಕ್ ಆಡುವಾಗ ಮುಖಕ್ಕೆ ಏಟು ಬಿತ್ತು ಎಂದು ತ್ರಿವಿಕ್ರಂ ಅವರು ಮಂಜು ವಿರುದ್ಧ ಆರೋಪ ಮಾಡಿದ್ದಾರೆ. ಈ ಆರೋಪದಿಂದ ಮಂಜು ಹಾಗೂ ತ್ರಿವಿಕ್ರಂ ಮಧ್ಯೆ ಚರ್ಚೆ ಆರಂಭ ಆಗಿದೆ. ಇದು ಫಿನಾಲೆ ಟಿಕೆಟ್ ಪಡೆಯೋ ಟಾಸ್ಕ್ ಆಗಿರುವುದರಿಂದ ಎಲ್ಲರೂ ಸಾಕಷ್ಟು ಅಗ್ರೆಷನ್ ತೋರಿಸುತ್ತಿದ್ದಾರೆ. ಸ್ಪರ್ಧಿಗಳ ಮಧ್ಯೆ ಫೈಟ್ ಜೋರಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More