AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ಕನ್ನಡದಲ್ಲಿರುವ ಫಲಕಕ್ಕೆ ತೆಲುಗು ಭಾಷಿಕರ ವಿರೋಧ

ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ಕನ್ನಡದಲ್ಲಿರುವ ಫಲಕಕ್ಕೆ ತೆಲುಗು ಭಾಷಿಕರ ವಿರೋಧ

ಭೀಮೇಶ್​​ ಪೂಜಾರ್
| Edited By: |

Updated on: Dec 27, 2025 | 3:01 PM

Share

ಮಂತ್ರಾಲಯದ ರಾಯರ ಮಠದಲ್ಲಿ ಮುಖ್ಯ ದ್ವಾರದಲ್ಲಿರುವ ಕನ್ನಡ ಶ್ಲೋಕದ ಫಲಕ ಭಾಷಾ ವಿವಾದಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿರುವ ಮಠದಲ್ಲಿ ತೆಲುಗು ಭಾಷೆ ಇರಬೇಕು ಎಂದು ತೆಲುಗು ಭಾಷಿಕರು ಸಾಮಾಜಿಕ ಜಾಲತಾಣಗಳಲ್ಲಿ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಠದ ಮೂಲಗಳ ಪ್ರಕಾರ, ಈ ಫಲಕವು ಹಲವು ವರ್ಷಗಳಿಂದ ಇದೆ ಎನ್ನಲಾಗುತ್ತಿದೆ.

ರಾಯಚೂರು, ಡಿಸೆಂಬರ್​​ 27: ಆಂಧ್ರ ಮತ್ತು ರಾಯಚೂರು ಗಡಿಯ ಮಂತ್ರಾಲಯದಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭಾಷಾ ವಿವಾದ ತಟ್ಟಿದೆ. ಮಠದ ಮುಖ್ಯ ದ್ವಾರದಲ್ಲಿ ಕನ್ನಡದಲ್ಲಿ ಬರೆಯಲಾಗಿರುವ ಪೂಜ್ಯಾಯ ರಾಘವೇಂದ್ರಾಯ ಸತ್ಯಧರ್ಮ ರತಾಯಚ ಎಂಬ ಶ್ಲೋಕದ ಫಲಕಕ್ಕೆ ತೆಲುಗು ಭಾಷಿಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಂತ್ರಾಲಯವು ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ್ದರಿಂದ, ಇಲ್ಲಿ ತೆಲುಗು ಭಾಷೆಯಲ್ಲಿ ಫಲಕ ಇರಬೇಕು ಎಂದು ಅವರು ವಾದಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಲವರು ಆಂಧ್ರಪ್ರದೇಶ ಸಿಎಂ ಮತ್ತು ಉಪಮುಖ್ಯಮಂತ್ರಿಗಳಿಗೆ ಟ್ಯಾಗ್ ಮಾಡಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಫಲಕ ಇಂದು ನಿನ್ನೆಯದಲ್ಲ, ಹಲವು ವರ್ಷಗಳಿಂದಲೂ ಕನ್ನಡದಲ್ಲಿಯೇ ಇದೆ ಎಂದು ವರದಿಯಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.