AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ

ಮಂತ್ರಾಲಯ ರಾಯರ ಮಠದ ಹುಂಡಿಯಲ್ಲಿ 4 ಕೋಟಿ ರೂಪಾಯಿಗೂ ಅಧಿಕ ಹಣ ಸಂಗ್ರಹ

ಭೀಮೇಶ್​​ ಪೂಜಾರ್
| Edited By: |

Updated on: Apr 25, 2025 | 10:09 AM

Share

ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠದ ಹುಂಡಿಯಲ್ಲಿ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ. ಇದರಲ್ಲಿ 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ ಮತ್ತು 1 ಕೆಜಿ 495 ಗ್ರಾಂ ಬೆಳ್ಳಿ ಸೇರಿವೆ. ಬೇಸಿಗೆ ರಜೆಯಿಂದ ಭಕ್ತರ ಸಂಖ್ಯೆ ಹೆಚ್ಚಾಗಿದ್ದು, ದೇಣಿಗೆಯ ಪ್ರಮಾಣವು ಏರಿಕೆಯಾಗಿದೆ.

ರಾಯಚೂರು, ಏಪ್ರಿಲ್​ 25: ಮಂತ್ರಾಲಯದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಹುಂಡಿಯಿಂದ ಕೋಟಿ-ಕೋಟಿ ಹಣ ಹರಿದು ಬಂದಿದೆ. ರಾಯರ ಮಠದಲ್ಲಿ ಸಿಬ್ಬಂದಿ ಹಾಗೂ ಸ್ವಯಂಸೇವಕರು ಹುಂಡಿ ಹಣ ಎಣಿಕೆ ಕಾರ್ಯ ನಡೆಸಿದರು. ಕಳೆದ 32 ದಿನಗಳಲ್ಲಿ 4 ಕೋಟಿಗೂ ಅಧಿಕ ಹಣ ಹುಂಡಿಯಲ್ಲಿ ಸಂಗ್ರಹವಾಗಿದೆ. 4,05,95,395 ರೂಪಾಯಿ ನಗದು, 116 ಗ್ರಾಂ ಚಿನ್ನ, 1 ಕೆಜಿ 495 ಗ್ರಾಂ ಬೆಳ್ಳಿ ಹುಂಡಿಯಲ್ಲಿ ಸಂಗ್ರಹವಾಗಿದೆ.
ಬೇಸಿಗೆ ರಜೆ ಹಿನ್ನೆಲೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಶ್ರೀಮಠಕ್ಕೆ ತೆರಳುತ್ತಿದ್ದಾರೆ. ಹೀಗಾಗಿ, ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹುಂಡಿಯಲ್ಲಿ ನಾಲ್ಕು ಕೋಟಿ ರೂ. ಕಾಣಿಕೆ ದಾಟಿದೆ.

Follow Us
Bhemesh Poojar
Bhemesh Poojar

ಕಳೆದ 10 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.ಈ ಹಿಂದೆ ಬೆಂಗಳೂರು ನಗರದಲ್ಲಿ ಕ್ರೈಂ ರಿಪೋರ್ಟರ್ ಆಗಿ ಎಂಟು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದೇನೆ.ಟಿವಿ9 ಸಂಸ್ಥೆಯಲ್ಲಿ ಕಳೆದ ಎರಡು ವರ್ಷಗಳಿಂದ ರಾಯಚೂರು ಜಿಲ್ಲಾ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ.ನನ್ನ ಹವ್ಯಾಸ ಕ್ರಿಕೆಟ್ ಆಡುವುದು.

Read More