AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ಮಂತ್ರಾಲಯ ರಾಯರ ಹುಂಡಿಯಲ್ಲಿ ಕೇವಲ 21 ದಿನಗಳಲ್ಲಿ 2.48 ಕೋಟಿ ರೂ. ಸಂಗ್ರಹ

ಭೀಮೇಶ್​​ ಪೂಜಾರ್
| Edited By: |

Updated on: Apr 02, 2026 | 9:18 AM

Share

ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಮಾರ್ಚ್ ತಿಂಗಳ ಹುಂಡಿ ಎಣಿಕೆ ನಡೆದಿದ್ದು, ಕೇವಲ 21 ದಿನಗಳಲ್ಲಿ 2.48 ಕೋಟಿ ರೂಪಾಯಿ ನಗದು ಹಾಗೂ ಕೆಜಿಗಟ್ಟಲೆ ಬೆಳ್ಳಿ-ಚಿನ್ನದ ಆಭರಣಗಳು ಕಾಣಿಕೆಯಾಗಿ ಸಂಗ್ರಹವಾಗಿವೆ. ಹುಂಡಿ ಎಣಿಕೆಯ ವಿಡಿಯೋ ಮತ್ತು ಸಂಗ್ರಹವಾದ ನಗದು, ಚಿನ್ನ-ಬೆಳ್ಳಿ ಕುರಿತ ಮಾಹಿತಿ ಇಲ್ಲಿ ನೀಡಲಾಗಿದೆ.

ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿಯ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us