ಮಂತ್ರಾಲಯದಲ್ಲಿ 6 ದಿನಗಳ ಕಾಲ ಶ್ರೀ ರಾಘವೇಂದ್ರ ಸ್ವಾಮಿಗಳ ಗುರು ವೈಭವೋತ್ಸವ
ಮಂತ್ರಾಲಯದ ರಾಯರ ಮಠ ಮಧುವನಗಿತ್ತಿಯಂತೆ ಶೃಂಗಾರಗೊಂಡಿದೆ. ಕಲಿಯುಗ ಕಾಮದೇನು ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕದ ಜೊತೆ ಗುರು ವೈಭವೋತ್ಸವ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.ರಾಯರ ಪಾದುಕೆಗಳ ವಿಶೇಷ ಪೂಜೆ ಪುನಸ್ಕಾರ ನೆರವೇರಿತು. ಆಂದ್ರಪ್ರದೇಶದ ಸಚಿವ ಹಾಗೂ ಸಿಎಂ ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ರಾಯರ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಗುರುವೈಭವೋತ್ಸವ ನಡೆಯುತ್ತಿದೆ. ಗುರು ವೈಭವೋತ್ಸವ ಅಂಗವಾಗಿ ಮೊದಲ ದಿನ ರಾಯರ ಪಟ್ಟಾಭಿಷೇಕ ಕಾರ್ಯಕ್ರಮ ಜರುಗಿದೆ. ಮಾರ್ಚ್ 6 ರಂದು ರಾಘವೇಂದ್ರ ಸ್ವಾಮಿಗಳ 430 ನೇ ಜನ್ಮದಿನ ಆಚರಿಸಲಾಗುತ್ತಿದೆ. ಶ್ರೀಗಳು ವಜ್ರ ಖಚಿತ ಮೂಲ ರಾಮದೇವರಿಗೆ, ರಾಯರ ಮೂಲ ಬೃಂದಾವನಕ್ಕೆ ಅಭಿಷೇಕದೊಂದಿಗೆ ಪೂಜೆ ಮಾಡುವ ಮೂಲಕ ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಂದ್ರಪ್ರದೇಶದ ಸಚಿವ ಹಾಗೂ ಸಿಎಂ ಚಂದ್ರಬಾಬು ನಾಯ್ಡು ಪುತ್ರ ನಾರಾ ಲೋಕೇಶ್ ರಾಯರ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
Loading...
Unable to load recommendations.
Follow Us