ಬೆಳಗಾವಿ ಜಿಲ್ಲೆಯಲ್ಲಿ ಮರಾಠಿ ಭಾಷಿಕರಿಂದ ಮತ್ತೇ ಪುಂಡಾಟ, ಕರ್ತವ್ಯನಿರತ ಕೆಎಸ್ಸಾರ್ಟಿಸಿ ನಿರ್ವಾಹಕ, ಚಾಲಕ ಮೇಲೆ ಹಲ್ಲೆ

ಅರುಣ್​ ಕುಮಾರ್​ ಬೆಳ್ಳಿ

Updated on: Feb 21, 2025 | 5:58 PM

ಕನ್ನಡನಾಡಲ್ಲಿ ಕನ್ನಡಿಗರಿಗೆ ರಕ್ಷಣೆ ಇಲ್ಲವೇ? ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಪುಂಡಾಟ ನೋಡುತ್ತಿದ್ದರೆ ಇಂಥದೊಂದದು ಪ್ರಶ್ನೆ ಕನ್ನಡಿಗರಲ್ಲಿ ಏಳುತ್ತದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ಕನ್ನಡ ಪರ ಸಂಘಟನೆಗಳು ನಾಳೆ ಪ್ರತಿಭಟನೆ ನಡೆಸಲಿವೆಯಂತೆ. ಅಷ್ಟಾದರೆ ಸಾಕೇ? ಯಾಕೆಂದರೆ ಇದಕ್ಕೂ ಮೊದಲು ಸಹ ಪ್ರತಿಭಟನೆಗಳಾಗಿವೆ ಮತ್ತು ದೂರುಗಳು ದಾಖಲಾಗಿವೆ. ಆದರೆ ಮರಾಠಿ ಭಾಷಿಕರು ಜಗಳ ಕಾಯುವುದನ್ನು ನಿಲ್ಲಿಸಿಲ್ಲ.

ಬೆಳಗಾವಿ: ಜಿಲ್ಲೆಯಲ್ಲಿ ಮರಾಠಿ ಭಾಷಿಕ ಪುಂಡರ ಗೂಂಡಾಗಿರಿ ಬಗ್ಗೆ ನಾವು ಆಗಾಗ್ಗೆ ವರದಿ ಮಾಡಿದರೂ ಅವರ ಪುಂಡಾಟ ನಿಲ್ಲುತ್ತಿಲ್ಲ. ಸುಳೇಭಾವಿ ಮತ್ತು ಸಣ್ಣ ಬಾಳೆಕುಂದ್ರಿ ಗ್ರಾಮದ ನಡುವೆ ಮರಾಠಾ ಪುಂಡರು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಕರ್ತವ್ಯನಿರತ ಕಂಡಕ್ಟರ್ ಮತ್ತು ಡ್ರೈವರ್ ಮೇಲೆ ಹಲ್ಲೆ ಮಾಡಿದ್ದಾರೆ. ಬಿಮ್ಸ್ ನಲ್ಲಿ ಚಿಕಿತ್ಸೆ ಪಡೆದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿರುವ ಕಂಡಕ್ಟರ್, ಮರಾಠಿಯಲ್ಲಿ ಮಾತಾಡುತ್ತ ಟಿಕೆಟ್ ಕೇಳಿದ ಮಹಿಳೆಯೊಬ್ಬರಿಗೆ ಕನ್ನಡದಲ್ಲಿ ಹೇಳಿ ಅಂದಿದ್ದಕ್ಕೆ ಗಲಾಟೆ ಶುರುವಾಗಿದೆಯಂತೆ. ಹಿರಿವಯಸ್ಸಿನವರಾಗಿರುವ ನಿರ್ವಾಹಕ ಗೂಂಡಾಗಳ ಗುಂಪು ತಮಗೆ ಥಳಸಿದ್ದನ್ನು ಹೇಳುವಾಗ ಅತ್ತುಬಿಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕನ್ನಡ ಹಾಡು ಹಾಕಿದ್ದಕ್ಕೆ ಬೈಕ್ಗೆ ಬೆಂಕಿ ಹಚ್ಚಿ ಹಲ್ಲೆ ನಡೆಸಿ ಎಂಇಎಸ್ ಗೂಂಡಾಗಳ ಪುಂಡಾಟ; 10 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.