ಬೆಂಗಳೂರು: ವಿಧಾನ ಸಭಾ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಬಿಜೆಪಿಯ ಹೀನಾಯ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ಸಲ್ಲಿಸುವುದಾಗಿ ಹೇಳಿ ಕೆಲದಿನಗಳ ಮಟ್ಟಿಗೆ ಮುಗಿಮ್ಮಾಗಿದ್ದ ಮತ್ತು ಮಾಧ್ಯಮದವರ ಜೊತೆ ಅಷ್ಟಕಷ್ಟೇ ಮಾತಾಡುತ್ತಿದ್ದ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಈಗ ಪುನಃ ಮೊದಲಿನ ಹಾಗೆ ಮಾತಾಡುತ್ತಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಟೀಲ್, ಡಿಸೆಂಬರ್ ನಲ್ಲಿ ರಾಜ್ಯದ ಚುನಾಯಿತ ಸರ್ಕಾರ (elected government) ಬಿದ್ದು ಹೋಗುತ್ತದೆ ಅಂತ ಘೋಷಿಸಿದರು! ಬಿಜೆಪಿ ಇದುವರೆಗೆ ವಿರೋಧ ಪಕ್ಷದ ನಾಯಕನನ್ನು (Leader of Opposition) ಆಯ್ಕೆ ಮಾಡದ್ದನ್ನು ಮಾಧ್ಯಮದವರರು ಪ್ರಶ್ನಿಸಿದಾಗ ಅವರು ಕೊಟ್ಟ ಉತ್ತರ ಅಸಂಮಜಸವಾಗಿತ್ತು. ಕಾಂಗ್ರೆಸ್ ಪಕ್ಷ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು 4 ದಿನ ತೆಗೆದುಕೊಂಡಿತ್ತು, ರಾಜ್ಯಕ್ಕೆ ಮುಖ್ಯಮಂತ್ರಿ ಬೇಕಾಗುತ್ತದೆ, ವಿರೋಧ ಪಕ್ಷ ನಾಯಕನಲ್ಲ ಅಂತ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ