‘ಮಾರ್ಟಿನ್’ ತಂಡದಲ್ಲಿ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ

Updated on: Jul 26, 2024 | 8:18 PM

ಬಹುನಿರೀಕ್ಷಿತ ‘ಮಾರ್ಟಿನ್​’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ನಡುವೆ ಕೆಲವು ಶಾಕಿಂಗ್​ ಸಂಗತಿಗಳ ಬಗ್ಗೆ ಸುದ್ದಿ ಪ್ರಕಟ ಆಗಿವೆ. ಧ್ರುವ ಸರ್ಜಾ ನಟನೆಯ ಈ ಚಿತ್ರದ ನಿರ್ದೇಶಕ ಎ.ಪಿ. ಅರ್ಜುನ್​ ಅವರು ಕಮಿಷನ್​ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಆರೋಪವನ್ನು ಎ.ಪಿ. ಅರ್ಜುನ್​ ತಳ್ಳಿ ಹಾಕಿದ್ದಾರೆ. ತಮ್ಮ ಮೇಲೆ ಬಂದ ಆರೋಪಕ್ಕೆ ಸ್ಪಷ್ಟನೆ ನೀಡಲು ಸುದ್ದಿಗೋಷ್ಠಿ ನಡೆಸಿದ್ದಾರೆ.

ಧ್ರುವ ಸರ್ಜಾ ನಟನೆಯ ‘ಮಾರ್ಟಿನ್​’ ಚಿತ್ರತಂಡದಲ್ಲಿ ಮನಸ್ತಾಪ ಆಗಿದೆ ಎನ್ನಲಾಗಿದೆ. ನಿರ್ದೇಶಕ ಎ.ಪಿ. ಅರ್ಜುನ್​ ಅವರ ಮೇಲೆ ಕೆಲವು ಆರೋಪಗಳು ಕೇಳಿಬಂದಿವೆ. ನಿರ್ದೇಶಕರಿಂದಲೇ ನಿರ್ಮಾಪಕರಿಗೆ ಮೋಸ ಆಗಿದೆ ಎನ್ನುವ ಸುದ್ದಿಗಳು ಹರಿದಾಡಿವೆ. ಇದಕ್ಕೆ ಸ್ಪಷ್ಟನೆ ನೀಡಲು ಎ.ಪಿ. ಅರ್ಜುನ್​ ಅವರು ಇಂದು (ಜುಲೈ 26) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ಕರೆದಿದ್ದಾರೆ. ಸಿನಿಮಾದ ಸಿಜಿ ವರ್ಕ್​ಗಾಗಿ ಕೊಟ್ಟಿದ್ದ ಹಣದಲ್ಲಿ ನಿರ್ದೇಶಕರಿಗೂ ಕಮಿಷನ್ ಹೋಗಿತ್ತಾ ಎಂಬ ಅನುಮಾನ ಇದೆ. ಈ ವಿಚಾರದ ಬಗ್ಗೆ ಎ.ಪಿ. ಅರ್ಜುನ್ ಅವರು ತಮ್ಮ ವಕೀಲರ ಜೊತೆ ಬಂದು ಸುದ್ದಿಗೋಷ್ಠಿಯಲ್ಲಿ ಸಂಪೂರ್ಣ ವಿವರ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More